ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಇತ್ತೀಚೆಗಷ್ಟೇ ಶಾಲಾ ಬ್ಯಾಗ್ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.
ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.
2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸೂಚನೆ ನೀಡಿದೆ.
ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.
ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.
2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…
ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್ಗಳಲ್ಲಿ…
ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…
ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…