ಬೆಂಗಳೂರು: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ’ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಇತ್ತೀಚೆಗಷ್ಟೇ ಶಾಲಾ ಬ್ಯಾಗ್ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.
ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.
2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸೂಚನೆ ನೀಡಿದೆ.
ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಜಿಲ್ಲಾ, ತಾಲ್ಲೂಕು ಹಾಗೂ ಕ್ಲಸ್ಟರ್ ಮಟ್ಟದಲ್ಲಿ ನಡೆಸಲಾಗುವ ಮುಖ್ಯ ಶಿಕ್ಷಕರು ಶಿಕ್ಷಕರ ಸಭೆಗಳಲ್ಲಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.
ಸಂಭ್ರಮ ಶನಿವಾರ ದಂದು ಜಿಲ್ಲಾ ಹಂತ, ಬ್ಲಾಕ್ ಹಂತದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಲಾಗಿದೆ.
2023-24ನೇ ಶೈಕ್ಷಣಿಕ ಸಾಲಿನ ‘ಸಂಭ್ರಮ ಶನಿವಾರ’ ಆಚರಣೆಗೆ ಸಂಬಂಧಿಸಿದ ಜಿಲ್ಲಾ ಹಂತದ ಕ್ರೋಡೀಕೃತ ವರದಿಯನ್ನು ಪ್ರತಿ ತಿಂಗಳು ಸಿದ್ಧಪಡಿಸಿ ಕಚೇರಿಗೆ ಕಳುಹಿಸಿಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…