BREAKING NEWS

ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಸಿದ್ದರಾಮಯ್ಯ

ಬೆಂಗಳೂರು: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ನೀವು ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು.

ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಭುತ್ವದ ಮೇಲೆ ನಿಂತಿದೆ ಎಂದು ಅಂಬೇಡ್ಕರ್ ಹೇಳಿದ್ದರು. ಹೀಗಾಗಿ ಸಾಮಾಜಿಕ ಪ್ರಭುತ್ವದ ಮೂಲಕ ಅರ್ಥಪೂರ್ಣ ರಾಜಕೀಯ ಸ್ವಾತಂತ್ರ್ಯ ಧಕ್ಕಿಸಿಕೊಳ್ಳಲು ಅಕ್ಷರ ವಂಚಿತರಿಗೆ ಶಿಕ್ಷಣ ದೊರಕಿಸುವ ಅಗತ್ಯವಿದೆ. ನಿಮಗೆ ಉತ್ತಮ ಶಿಕ್ಷಣ ಸಿಕ್ಕಿದ್ದರಿಂದಲೇ ನೀವು ಉದ್ಯಮಪತಿಗಳಾಗಲು, ಆರ್ಥಿಕವಾಗಿ ದೇಶಕ್ಕೆ ಕೊಡುಗೆ ಕೊಡಲು ಸಾಧ್ಯವಾಗಿದೆ. ಸ್ವಾಭಿಮಾನದಿಂದ ಬದುಕಲು ಆರ್ಥಿಕ, ಸಾಮಾಜಿಕ ಅವಕಾಶಗಳು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

ಬಡವ ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡಬೇಕು ಎನ್ನುವ ಉದ್ದೇಶದಿಂದಲೇ ಸಾರ್ವತ್ರಿಕ ಮೂಲ ಆದಾಯ ಎನ್ನುವ ತತ್ವದ ಅಡಿಯಲ್ಲಿ  ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತಿದೆ. ಇದೇ ಆಶಯದ ಅಡಿಯಲ್ಲಿ ಆಯವ್ಯಯವನ್ನು ರೂಪಿಸಲಾಗಿದ್ದು,  ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರಿಗೂ ಅನ್ವಯ ಆಗುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಮುಂದಾಗಿದ್ದೇವೆ. ಇದರಿಂದಾಗಿ ಆರ್ಥಿಕತೆಗೆ ಹೊಸ ಚೈತನ್ಯ ಮತ್ತು ಶಕ್ತಿ ಬಂದಿದೆ. ನಾಡಿನ ಮಹಿಳೆಯರಿಗೆ ಆರ್ಥಿಕ‌ ಸಫಲತೆ ಬಂದಿದೆ. ಹಸಿವಿನಿಂದ ಮಲಗುವವರು ಇಲ್ಲವಾಗಿದೆ. ಬಾಲ ಕಾರ್ಮಿಕ ಪದ್ಧತಿ ನಶಿಸಲು ನಮ್ಮ ಕಾರ್ಯಕ್ರಮ ಮತ್ತು ಗ್ಯಾರಂಟಿಗಳು ನೆರವಾಗುತ್ತಿವೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ,ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ , ಜಿ.ಪರಮೇಶ್ವರ್, ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ  ಗೋವಿಂದರಾಜ್ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.

andolanait

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

29 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

59 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

6 hours ago