BREAKING NEWS

ಸರ್ಕಾರ ಸೆಂಚುರಿ ಬಾರಿಸಿ ಮುನ್ನುಗ್ಗಿದೆ, ಕೆಲಸ ಜನರ ಕಣ್ಣಿಗೆ ಕಾಣುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು:“ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ ನೂರು ದಿನಗಳು ಪೂರ್ಣಗೊಂಡಿರುವ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಉತ್ತರಿಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಮ್ಮ ಸರ್ಕಾರ ನೂರು ದಿನಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆಲ್ಲೆಡೆ ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.10 ಕೋಟಿ ಮನೆ ಯಜಮಾನಿಯರಿಗೆ ಆ. 30 ರಿಂದ ಪ್ರತಿ ತಿಂಗಳು 2 ಸಾವಿರ ರೂ. ಹಣ ತಲುಪಲಿದೆ.

1.36 ಲಕ್ಷ ಜನರಿಗೆ ಉಚಿತ ಅಕ್ಕಿ ತಲುಪುತ್ತಿದೆ. 1.41 ಕೋಟಿ ಗ್ರಾಹಕರಿಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ಸಿಗುತ್ತಿದೆ. ಡಿಸೆಂಬರ್ ವೇಳೆಗೆ ನಿರುದ್ಯೋಗಿ ಯುವಕರಿಗೆ ಭತ್ಯೆ ಯೋಜನೆ ಜಾರಿ ಮಾಡುತ್ತೇವೆ. ಇದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ. ನಾವು ಕೊಟ್ಟ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದು, ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಯಾವ ಸರ್ಕಾರ ಇಷ್ಟು ಕೆಲಸ ಮಾಡಿದೆ ಹೇಳಿ?”

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಅವರ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಪ್ರಿಯಾಂಕ್ ಖರ್ಗೆ ಅವರ ಜತೆ ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಇತರೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಎನ್ ಆರ್ ಐ ವಿಚಾರ, ಬೆಂಗಳೂರಿನಲ್ಲಿ ಉಚಿತ ವೈ-ಫೈ ವಲಯ ನಿರ್ಮಾಣ ಸಂಬಂಧ ಸಭೆಯ ದಿನಾಂಕ ಪ್ರಕಟಿಸುತ್ತೇವೆ” ಎಂದು ತಿಳಿಸಿದರು. ಸುಳ್ಳು ಸುದ್ದಿ ನಿಯಂತ್ರಣ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago