BREAKING NEWS

ಕಳೆದುಹೋದ ಮೊಬೈಲ್‌ ಪತ್ತೆಗಾಗಿ ಕರ್ನಾಟಕ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ

ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್​ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.

https://x.com/BlrCityPolice/status/1704733016915165414?s=20

ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

  • ಮೊದಲಿಗೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಗೂಗಲ್‌ ಪ್ಲೇ ಸ್ಟೋರ್‌ನಿಂದ KSP Application ಡೌನ್​ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಕೊಳ್ಳಬೇಕು.
  • ಮೊಬೈಲ್‌ ದೂರನ್ನು E-Lost ನಲ್ಲಿ ವರದಿ ಮಾಡಲು KSP Application ಅನ್ನು ಓಪನ್‌ ಮಾಡಿಕೊಳ್ಳಿ. ಅಲ್ಲಿಂದ E-Lost ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ.
  • ಈಗ E-Lost ವರದಿಯನ್ನು ನೊಂದಾಯಿಸಿಕೊಂಡು ಈ ಆಪ್ಶನ್‌ ಅನ್ನು ಆಯ್ಕೆ ಮಾಡಿರಿ.
  • ಬಳಿಕ ನಿಮ್ಮ ಹೆಸರು, ವಿಳಾಸ, ಜಿಲ್ಲೆ, ಮೊಬೈಲ್‌ ನಂಬರ್‌ ಹಾಗೂ ಇ-ಮೇಲ್‌ ಐಡಿ ನೊಂದಾಯಿಸಿರಿ. ನಂತರ ಮುಂದಿನ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ.
  • ನಿಮ್ಮ ಮೊಬೈಲ್‌ನ ಬಿಲ್‌ ಇದ್ದರೆ ಅದನ್ನು ಅಪ್‌ಲೋಡ್‌ ಮಾಡಿ ನಂತರ ನೆಕ್ಸ್ಟ್ ಒತ್ತಿರಿ
  • ಇದಾದ ಬಳಿಕ ಮೊಬೈಲ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ
  • ಮೊಬೈಲ್‌ ಮಾಹಿತಿಯನ್ನು ನೋಂದಾಯಿಸಿ. ಬಳಿಕ ಆಡ್‌ ಆಪ್ಶನ್‌ ಅನ್ನು ಆಯ್ಕೆ ಮಾಡಿಕೊಳ್ಳಿರಿ
  • ಕೊನೆಯಲ್ಲಿ ಮೊಬೈಲ್‌ ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಮಾಹಿತಿಯನ್ನು ನೀಡಿ ಸಬ್ಮಿಟ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ. ನಿಮಗೆ ಅದರಲ್ಲಿಯೇ ರಶೀದಿಯೂ ಸಿಗಲಿದೆ. ಅದನ್ನು ಡೌನ್‌ ಲೋನ್‌ ಮಾಡಿ ಇಟ್ಟುಕೊಳ್ಳಿರಿ.

ಸಂಚಾರ್ ಸಾಥಿ ಪೋರ್ಟಲ್

ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

11 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

13 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

14 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

14 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

14 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

16 hours ago