BREAKING NEWS

ಕಳೆದುಹೋದ ಮೊಬೈಲ್‌ ಪತ್ತೆಗಾಗಿ ಕರ್ನಾಟಕ ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ

ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್​ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.

https://x.com/BlrCityPolice/status/1704733016915165414?s=20

ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್‌ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್‌ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್‌ನಲ್ಲಿ ಈ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿ ಬ್ಲಾಕ್‌ ಮಾಡಿ ದೂರು ದಾಖಲಿಸಬಹುದು.

ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

  • ಮೊದಲಿಗೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿರುವ ಗೂಗಲ್‌ ಪ್ಲೇ ಸ್ಟೋರ್‌ನಿಂದ KSP Application ಡೌನ್​ಲೋಡ್ ಮಾಡಿಕೊಂಡು ನಿಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಕೊಳ್ಳಬೇಕು.
  • ಮೊಬೈಲ್‌ ದೂರನ್ನು E-Lost ನಲ್ಲಿ ವರದಿ ಮಾಡಲು KSP Application ಅನ್ನು ಓಪನ್‌ ಮಾಡಿಕೊಳ್ಳಿ. ಅಲ್ಲಿಂದ E-Lost ಆಯ್ಕೆಯನ್ನು ಸೆಲೆಕ್ಟ್ ಮಾಡಿಕೊಳ್ಳಿ.
  • ಈಗ E-Lost ವರದಿಯನ್ನು ನೊಂದಾಯಿಸಿಕೊಂಡು ಈ ಆಪ್ಶನ್‌ ಅನ್ನು ಆಯ್ಕೆ ಮಾಡಿರಿ.
  • ಬಳಿಕ ನಿಮ್ಮ ಹೆಸರು, ವಿಳಾಸ, ಜಿಲ್ಲೆ, ಮೊಬೈಲ್‌ ನಂಬರ್‌ ಹಾಗೂ ಇ-ಮೇಲ್‌ ಐಡಿ ನೊಂದಾಯಿಸಿರಿ. ನಂತರ ಮುಂದಿನ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ.
  • ನಿಮ್ಮ ಮೊಬೈಲ್‌ನ ಬಿಲ್‌ ಇದ್ದರೆ ಅದನ್ನು ಅಪ್‌ಲೋಡ್‌ ಮಾಡಿ ನಂತರ ನೆಕ್ಸ್ಟ್ ಒತ್ತಿರಿ
  • ಇದಾದ ಬಳಿಕ ಮೊಬೈಲ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ
  • ಮೊಬೈಲ್‌ ಮಾಹಿತಿಯನ್ನು ನೋಂದಾಯಿಸಿ. ಬಳಿಕ ಆಡ್‌ ಆಪ್ಶನ್‌ ಅನ್ನು ಆಯ್ಕೆ ಮಾಡಿಕೊಳ್ಳಿರಿ
  • ಕೊನೆಯಲ್ಲಿ ಮೊಬೈಲ್‌ ಕಳೆದು ಹೋದ ದಿನಾಂಕ, ಸಮಯ, ಸ್ಥಳದ ಮಾಹಿತಿಯನ್ನು ನೀಡಿ ಸಬ್ಮಿಟ್‌ ಆಪ್ಶನ್‌ ಆಯ್ಕೆ ಮಾಡಿಕೊಳ್ಳಿ. ನಿಮಗೆ ಅದರಲ್ಲಿಯೇ ರಶೀದಿಯೂ ಸಿಗಲಿದೆ. ಅದನ್ನು ಡೌನ್‌ ಲೋನ್‌ ಮಾಡಿ ಇಟ್ಟುಕೊಳ್ಳಿರಿ.

ಸಂಚಾರ್ ಸಾಥಿ ಪೋರ್ಟಲ್

ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್‌ ಐಫೋನ್​ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್​ನಲ್ಲಿ ಕಾರ್ಯನಿರ್ವಹಿಸಲಿದೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

12 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

15 hours ago