ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.
https://x.com/BlrCityPolice/status/1704733016915165414?s=20
ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್ ಐಫೋನ್ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್ನಲ್ಲಿ ಕಾರ್ಯನಿರ್ವಹಿಸಲಿದೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…