ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.
https://x.com/BlrCityPolice/status/1704733016915165414?s=20
ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್ ಐಫೋನ್ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್ನಲ್ಲಿ ಕಾರ್ಯನಿರ್ವಹಿಸಲಿದೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…