ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.
https://x.com/BlrCityPolice/status/1704733016915165414?s=20
ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್ ಐಫೋನ್ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್ನಲ್ಲಿ ಕಾರ್ಯನಿರ್ವಹಿಸಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…