ಬೆಂಗಳೂರು : ನಮ್ಮ ಜೊತೆ ದಿನದ 24 ಗಂಟೆಗಳ ಕಾಲ ಇರುವ ಸ್ಮಾರ್ಟ್ಫೋನ್ ದಿಢೀರ್ ಕಳೆದು ಹೋದರೆ ಆಗ ಆಗುವ ಟೆನ್ಶನ್ ಅಷ್ಟಿಟ್ಟಲ್ಲ. ಕೇವಲ ದುಬಾರಿ ಬೆಲೆ ವಸ್ತು ಎನ್ನುವುದಕ್ಕಿಂತಲೂ ಅದರಲ್ಲಿರುವ ಸಂಪರ್ಕ ಸಂಖ್ಯೆಗಳು, ಒಡನಾಡಿಗಳ ಜೊತೆಗಿರುವ ಫೋಟೋಗಳು ಮತ್ತು ಖಾಸಗಿ ಮಾಹಿತಿಗಳು ಸೋರಿಕೆಯಾಗುವ ಭಯ ಸಾಕಷ್ಟು ಕಾಡುತ್ತಿರುತ್ತದೆ. ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ.
https://x.com/BlrCityPolice/status/1704733016915165414?s=20
ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್ ಅನ್ನು ಬ್ಲಾಕ್ ಮಾಡಲು ಕರ್ನಾಟಕ ಪೊಲೀಸ್ ಇಲಾಖೆ ಆರಂಭಿಸಿರುವ ಕರ್ನಾಟಕ ರಾಜ್ಯ ಪೊಲೀಸ್ ಆ್ಯಪ್ ಸಹಾಯ ಮಾಡಲಿದೆ. ನಿಮ್ಮ ಬಳಿ ಇನ್ನೊಂದು ಮೊಬೈಲ್ ಇದ್ದರೆ ಅಥವಾ ಮನೆಯವರದ್ದು, ಸ್ನೇಹಿತರ ಮೊಬೈಲ್ನಲ್ಲಿ ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿ ಬ್ಲಾಕ್ ಮಾಡಿ ದೂರು ದಾಖಲಿಸಬಹುದು.
ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಯಾವರೀತಿ ನೋಂದಣಿ ಮಾಡಬೇಕು ಎಂಬ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಕಳೆದ ವರ್ಷಗಳಿಂದ ಮೊಬೈಲ್ ಕಳ್ಳತನ ದೇಶದಲ್ಲಿ ಗಣನೀಯವಾಗಿ ಏರಿಕೆ ಆಗುತ್ತಿದೆ. ಇದನ್ನು ಮನಗಂಡು ಕೇಂದ್ರ ಸರ್ಕಾರ ಕೂಡ ಜನರ ಫೋನ್ ಮತ್ತು ಡೇಟಾ ಕಳ್ಳತನಕ್ಕೆ ಪರಿಹಾರ ಕಂಡುಹಿಡಿದಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ”ಸಂಚಾರ್ ಸಾಥಿ ಪೋರ್ಟಲ್” ಅನ್ನು ಪ್ರಾರಂಭಿಸಸಿದದೆ. ಸಂಚಾರ್ ಸಾಥಿ ಪೋರ್ಟಲ್ ಅಡಿಯಲ್ಲಿ, ಬಳಕೆದಾರರು ತಮ್ಮ ಫೋನ್ ಅನ್ನು ಎಲ್ಲಿದೆ ಎಂದು ಹುಡುಕಬಹುದು ಅಥವಾ ಸ್ವಿಚ್ ಆಫ್ ಮಾಡಬಹುದು. ಆ್ಯಪಲ್ ಐಫೋನ್ನಲ್ಲಿರುವ ಫೈಂಡ್ ಮೈ ಫೋನ್ ವೈಶಿಷ್ಟ್ಯದಂತೆ ಇದು ಆಂಡ್ರಾಯ್ಡ್ ಫೋನ್ನಲ್ಲಿ ಕಾರ್ಯನಿರ್ವಹಿಸಲಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…