BREAKING NEWS

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಲಾಖಾ ತನಿಖೆಗೆ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿದೆ.

ರೋಹಿಣಿ ಸಿಂಧೂರಿ ಅವರು ನಿಯಮಗಳನ್ನು ಮೀರಿ ಇಲಾಖೆ ಅನುಮತಿ ಪಡೆಯದೆ ದುಡ್ಡು ಖರ್ಚು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ಪ್ರಾಥಮಿಕ‌ ತನಿಖೆಯಲ್ಲಿ ಅವರು ಅಸಮರ್ಪಕ ಉತ್ತರ ನೀಡಿದ್ದಾರೆ ಮತ್ತು ಯಾವುದೇ ದಾಖಲೆ‌ ನೀಡಿಲ್ಲ.

ಹೀಗಾಗಿ ಅವರ ವಿರುದ್ಧ ಇಲಾಖಾ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಅವರು ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಾಲು ಸಾಲು ಆರೋಪಗಳು ಕೇಳಿ ಬಂದಿತ್ತು. ಈ ವಿಚಾರವಾಗಿ ಕೆಆರ್ ನಗರ ಶಾಸಕರಾಗಿದ್ದ, ಮಾಜಿ ಸಚಿವ ಸಾ ರಾ ಮಹೇಶ್​ ಅವರು ಕೂಡ ಜಟಾಪಟಿ ನಡೆಸಿದ್ದರು. ವಿಧಾನಸೌಧದಲ್ಲೂ ಈ ವಿಚಾರ ಪ್ರತಿಧ್ವನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ದೂರು ಬಂದ ಸಂದರ್ಭದಲ್ಲಿ ಸರ್ಕಾರ ಪ್ರಾಥಮಿಕ ತನಿಖೆಯನ್ನು ನಡೆಸಿತ್ತು.

ಬಟ್ಟೆ ಬ್ಯಾಗ್​ ಖರೀದಿ ಸಂಬಂಧಿಸಿದಂತೆ 15 ರೂಪಾಯಿ ಬಿಲ್‌ಗೆ 50 ರೂಪಾಯಿ ಬಿಲ್​ ಹಾಕಿರುವ ಆರೋಪ ರೋಹಿಣಿ ಸಿಂಧೂರಿ ಅವರ ವಿರುದ್ಧ ಕೇಳಿ ಬಂದಿತ್ತು. ಪರಂಪರಿಕ ಕಟ್ಟಡಕ್ಕೆ ಧಕ್ಕೆ ಉಂಟಾಗುವಂತೆ ಈಜು ಕೊಳ ನಿರ್ಮಾಣ ಮಾಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿದೆ. ಉಳಿದಂತೆ ಚಾಮರಾಜನಗರ ಆಕ್ಸಿಜನ್​ ದುರಂತ ಪ್ರಕರಣದಲ್ಲಿ ಅಂದು ಮೈಸೂರಿನ ಜಿಲ್ಲಾಧಿಕಾರಿಗಳಾಗಿದ್ದ ರೋಹಿಣಿ ಅವರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪವೂ ಅವರ ಮೇಲಿದೆ.

ಅಂದಿನ ವಸತಿ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ ಜಿ ರವಿಶಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಪ್ರಾಥಮಿಕವಾಗಿ ಒಂದು ವರದಿ ಸಲ್ಲಿಕೆ ಮಾಡುವಂತೆ ಸರ್ಕಾರ ಸೂಚನೆ ನೀಡಿತ್ತು.

ಈ ತನಿಖೆಯ ಸಂದರ್ಭದಲ್ಲಿ ರೋಹಿಣಿ ಅವರು ಸಮರ್ಪಕ ಉತ್ತರ, ಸರಿಯಾಗಿ ಮಾಹಿತಿಯ ದಾಖಲೆಯಗಳು ಕೊಡದೆ ಇರುವ ಕಾರಣ ಮೇಲ್ನೋಟಕ್ಕೆ ಅಕ್ರಮ ನಡೆಸಿದ್ದಾರೆ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಮಿತಿ ವರದಿಯನ್ನು ಕೊಟ್ಟಿತ್ತು. ಈ ವರದಿಯ ಆಧಾರದ ಮೇಲೆ ಸರ್ಕಾರ ಈಗ ಇಲಾಖಾವಾರು ತನಿಖೆ ನಡೆಸಲು ಸಮಿತಿ ರಚನೆ ಮಾಡಿ ಆದೇಶ ನೀಡಿದೆ.

ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು. ಸದ್ಯ ತನಿಖೆಯಲ್ಲಿ ಸತ್ಯಾಂಶ ಹೊರ ಬರುತ್ತಾ ಅಂತ ಕಾದು ನೋಡಬೇಕಿದೆ.

ಪ್ರಾಥಮಿಕ ತನಿಖಾ ವರದಿಯಲ್ಲಿ ಆರೋಪಗಳು ಸತ್ಯ ಎಂದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಇಲಾಖಾವಾರು ತನಿಖೆಗೆ ನಡೆಸಲು ಮುಂದಾಗಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಯಾವುದೇ ಜಿಲ್ಲಾಧಿಕಾರಿಗೆ ಆಡಳಿತಾತ್ಮಕವಾಗಿ 2 ಕೋಟಿ ರೂಪಾಯಿಗೆ ಅನುಮೋದನೆ ನೀಡಲು ಅವಕಾಶ ಇದೆ. ಆದರೆ ರೋಹಿಣಿ ಅವರು 7 ಕೋಟಿ ರೂಪಾಯಿ ಅಧಿಕ ಮೊತ್ತಕ್ಕೆ ಅನುಮೋದನೆ ನೀಡಿದ್ದಾರೆ ಎಂದು ಸಾ ರಾ ಮಹೇಶ್ ನೇರ ಆರೋಪ ಮಾಡಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago