ಬೆಂಗಳೂರು: ನಾವು ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ 5 ಗ್ಯಾರಂಟಿಗಳನ್ನು ನೀಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಅರ್ಥಿಕವಾಗಿ ದಿವಾಳಿಯಾಗದಂತೆ 5
ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು. ಗ್ಯಾರಂಟಿಗಳಿಗೆ ತಾತ್ವಿಕವಾಗಿ ಸರ್ಕಾರ ಒಪ್ಪಿಗೆ ಕೊಟ್ಟಿದ್ದೇವೆ. ಗ್ಯಾರಂಟಿಗಳನ್ನು ಈಡೇರಿಸಲು
ಸರ್ಕಾರ ಬದ್ಧವಾಗಿದೆ. ಮುಂದಿನ ಸಚಿವ ಸಂಪುಟ ಸಭೆ ಆದ ಮೇಲೆ ಎಲ್ಲಾ ಭರವಸೆ ಕಡ್ಡಾಯವಾಗಿ ಜಾರಿ ಮಾಡುತ್ತೇವೆ ಎಂದರು.
5 ಗ್ಯಾರಂಟಿಗಳನ್ನು ಈಡೇರಿಸಲು 150 ಸಾವಿರ ಕೋಟಿ ಬೇಕಾಗುತ್ತದೆ. ಕಟ್ಟುನಿಟ್ಟಾಗಿ ತೆರಿಗೆ ವಸೂಲಿ ಮಾಡಿದರೆ ಆದಾಯ ಹೆಚ್ಚಳವಾಗುತ್ತದೆ ಎಂದು ಹೇಳಿದರು.
ರಾಜ್ಯದ ಬಜೆಟ್ 3 ಲಕ್ಷ 10 ಸಾವಿರ ಕೋಟಿ ರೂಪಾಯಿ ಆಗಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ತೆರಿಗೆ ಕೊಟ್ಟುತ್ತೇವೆ. ಆದರೆ, ಹಿಂದಿನ ರಾಜ್ಯ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಸವರಾಜ ಬೊಮ್ಮಾಯಿ ಅವರು ಜಿಎಸ್ಟಿ ಕೌನ್ಸಿಲ್ ಸದಸ್ಯರಾಗಿದ್ದರು. ಆದರೂ ರಾಜ್ಯಕ್ಕೆ ಬರಬೇಕಿದ್ದ ಜಿಎಸ್ಟಿ ಪಾಲು ಪಡೆಯುವಲ್ಲಿ ವಿಫಲರಾಗಿದ್ದರು ಎಂದರು. ಕೇಂದ್ರದಿಂದ ರಾಜ್ಯಕ್ಕೆ 5,495 ಕೋಟಿ ಬರಬೇಕಿದೆ ಎಂದು ತಿಳಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರಾದ ಡಾ. ಜಿ. ಪರಮೇಶ್ವರ್ ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.
ಕಾಂಗ್ರೆಸ್ ‘ಪಂಚ’ ಗ್ಯಾರಂಟಿ
* ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯುನಿಟ್ವರೆಗೆ ವಿದ್ಯುತ್ ಉಚಿತ
* ಗೃಹ ಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ ತಿಂಗಳಿಗೆ 32000
* ಅನಭಾಗ್ಯ – ಬಿಪಿಎಲ್ ಕಾರ್ಡ್ದಾರರಿಗೆ ಪ್ರತಿಯೊಬ್ಬರಿಗೂ 100 ಕೆ.ಜಿ. ಅಕ್ಕಿ ಉಚಿತ
* ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 33000 (2 ವರ್ಷ ಮಾತ್ರ)
* ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪಾಸ್ (ಕರ್ನಾಟಕದ ಮಹಿಳೆಯರಿಗೆ ಮಾತ್ರ)
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…