BREAKING NEWS

ಸಂಸತ್ತಿನ ಚಳಿಗಾಲ ಅಧಿವೇಶನ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ

ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್‌ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.

ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

1 hour ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

1 hour ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

2 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

3 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

3 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

3 hours ago