ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.
ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…