ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.
ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…
ನವದೆಹಲಿ: ರೌಡಿಶೀಟರ್ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…