BREAKING NEWS

ಸಂಸತ್ತಿನ ಚಳಿಗಾಲ ಅಧಿವೇಶನ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ

ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್‌ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.

ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

andolanait

Recent Posts

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

19 mins ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

1 hour ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

2 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

3 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

3 hours ago

ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ: ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…

4 hours ago