BREAKING NEWS

ಸಂಸತ್ತಿನ ಚಳಿಗಾಲ ಅಧಿವೇಶನ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ: ಪ್ರಹ್ಲಾದ್ ಜೋಶಿ

ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್‌ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.

ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

6 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

19 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

20 hours ago