ನವದೆಹಲಿ : ಸಂಸತ್ತಿನ ಚಳಿಗಾಲ ಅಧಿವೇಶನದ ರಚನಾತ್ಮಕ ಚರ್ಚೆಗೆ ಸರ್ಕಾರ ಸಂಪೂರ್ಣವಾಗಿ ಸಿದ್ದವಾಗಿದೆ. ಅಧಿವೇಶನ ಸುಗಮವಾಗಿ ನಡೆಯುವಂತೆ ವಿಪಕ್ಷಗಳಲ್ಲಿ ಮನವಿ ಮಾಡಿದ್ದೇವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ನವದೆಹಲಿಯಲ್ಲಿಂದು ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪಾರ್ಲಿಮೆಂಟ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನು ಜೋಶಿ ವಹಿಸಿದ್ದರು. ಚಳಿಗಾಲ ಅಧಿವೇಶನ ಸಂಬಂಧ ಶನಿವಾರ ನಡೆದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ 4ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ 23 ಪಕ್ಷಗಳ 30 ಮುಖಂಡರು ಭಾಗಿಯಗಿದ್ದರು ಎಂದರು.
ಈ ಬಾರಿ ಸದನದಲ್ಲಿ ರಚನಾತ್ಮಕ ಚರ್ಚೆಗಳ ವಾತಾವರಣ ಉಳಿಸಿಕೊಳ್ಳುವಂತೆ ಸರ್ವಪಕ್ಷಗಳಲ್ಲಿ ವಿನಂತಿಸಿಕೊಂಡಿದ್ದೇವೆ. ಎಲ್ಲೂ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸಿ ಚರ್ಚೆಗಳು ನಡೆಯಬೇಕು. ಈ ಬಾರಿಯೂ ಕೂಡಾ ಶೂನ್ಯ ವೇಳೆ ನಿಯಮಿತವಾಗಿ ನಡೆಯುತ್ತದೆ. ಸರ್ಕಾರವು ಎಲ್ಲಾ ರಚನಾತ್ಮಕ ವಿಷಯಗಳ ಬಗ್ಗೆ ಚರ್ಚೆ ಮಾಡಲು ಸಂಪೂರ್ಣವಾಗಿ ಸಿದ್ಧವಿದೆ ಎಂದು ಅವರಿಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.
17ನೇ ಲೋಕಸಭೆಯ 14ನೇ ಅಧಿವೇಶನ ಮತ್ತು ರಾಜ್ಯಸಭೆಯ 262ನೇ ಅಧಿವೇಶನದಲ್ಲಿ ಕೈಗೆತ್ತಿಕೊಳ್ಳಬಹುದಾದ ಮಸೂದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…