BREAKING NEWS

ಕೋವಿಡ್‌ ಸಮಯದಲ್ಲಿ ನಡೆದ ಅಕ್ರಮಗಳ ತನಿಖೆಗೆ ಸರ್ಕಾರ ಶಿಫಾರಸ್ಸು ಮಾಡಿದೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಕೋವಿಡ್ ಕಾಲಮಾನದಲ್ಲಿ ನಡೆದ ಅವ್ಯವಹಾರಗಳು ಹಾಗೂ ಇತರ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ಜಯನಗರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿ ಹಾಗೂ ಇತರ ವ್ಯವಹಾರಗಳಲ್ಲಿ ಮಾರುಕಟ್ಟೆ ದರ ಮೀರಿ, ಒಂದಕ್ಕೆ ಹತ್ತು ಪಟ್ಟು ದುಬಾರಿ ಬಿಲ್ ಪಾವತಿ ಮಾಡಲಾಗಿದೆ. ಈ ವಿಚಾರವನ್ನು ತನಿಖೆ ನಡೆಸಬೇಕೆಂದು ಆರಂಭದಿಂದಲೂ ಒತ್ತಡಗಳಿವೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಕೂಡ ವರದಿ ನೀಡಿವೆ ಎಂದರು.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿ ನ್ಯಾಯಾಂಗ ತನಿಖೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.

ಅನಾಥ ಶವಗಳು, ರಸ್ತೆಬದಿಗಳಲ್ಲಿ ಮೃತಪಟ್ಟವರ ಪಾರ್ಥೀವ ಶರೀರಗಳನ್ನು ಮಾರಾಟ ಮಾಡಿಕೊಳ್ಳುವಂತಹ ಮೆಡಿಕಲ್ ಮಾಫಿಯಾ ತಲೆ ಎತ್ತುತ್ತಿದೆ ಎಂಬ ಆರೋಪ ಗಂಭೀರವಾದದ್ದು. ಇದನ್ನು ಸರ್ಕಾರ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಮಾಹಿತಿ ಕಲೆ ಹಾಕಲಾಗುವುದು. ಆರೋಪ ಮಾಡಿದವರಿಂದಲೂ ವಿವರಣೆ ಪಡೆದು ನಂತರ ತನಿಖೆಗೆ ಸಮಿತಿ ರಚಿಸಬೇಕೇ ಎಂಬುದರ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು.

ತುರ್ತು ಸೇವೆಯಾದ ಆರೋಗ್ಯ ಕವಚ ಯೋಜನೆ ಸುಧಾರಣೆಗೆ ರಚಿಸಲಾಗಿರುವ ಸಮಿತಿ ವಾರದೊಳಗಾಗಿ ವರದಿ ನೀಡಲಿದ್ದು, ಮುಂದಿನ 2-3 ತಿಂಗಳೊಳಗಾಗಿ ಹೊಸ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದರು.

ಇತ್ತೀಚೆಗಷ್ಟೇ 170 ಹೊಸ ಆಂಬುಲೆನ್ಸ್‍ಗಳನ್ನು ಖರೀದಿಸಲಾಗಿದೆ. ಬಹಳ ವರ್ಷಗಳಿಂದಲೂ 108 ಸೇವೆ ಟೆಂಡರ್ ಇಲ್ಲದೆ ಹಳೆಯ ಒಪ್ಪಂದದ ಮೇಲೆಯೇ ಮುಂದುವರೆದುಕೊಂಡು ಬಂದಿವೆ. ಒಂದು ಕಾಲದಲ್ಲಿ ಮುಂಚೂಣಿಯಲ್ಲಿದ್ದ ಸೇವೆ ಈಗ ಹಿಂದುಳಿದಿದೆ. ಆಧುನಿಕ ತಂತ್ರಜ್ಞಾನ ಅಳವಡಿಕೆ, ಕ್ಷಿಪ್ರ ಪ್ರತಿಕ್ರಿಯೆ ಸೇರಿದಂತೆ ಹಲವರು ಲೋಪದೋಷಗಳಿವೆ. ಇವುಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

ಕಳೆದ ಬಜೆಟ್‍ನಲ್ಲಿ ಘೊಷಿಸಲಾದ ಆಶಾಕಿರಣ ಯೋಜನೆಯನ್ನು ಇದೇ ತಿಂಗಳಿನಲ್ಲಿ ಉದ್ಘಾಟಿಸಲಾಗುವುದು. ಕಾಂಟ್ರಾಕ್ಟ್ ಲೆನ್ಸ್ ಮತ್ತು ಶಸ್ತ್ರಚಿಕಿತ್ಸೆ ಮೂಲಕ ನೆರವಾಗುವ ಮಹತ್ವದ ಯೋಜನೆ ಶೀಘ್ರವೇ ಜಾರಿಯಾಗಲಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ನೇಮಕಾತಿಯಾಗಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ ಮತ್ತು ಡಿ ದರ್ಜೆ ಸಿಬ್ಬಂದಿಗಳ ಕೊರತೆ ಇದೆ. ಇದನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಖಾಸಗಿ ಕ್ಲಿನಿಕ್ ಸೇರಿದಂತೆ ಇತರೆಡೆ ಕೆಲಸ ಮಾಡಲು ಅವಕಾಶ ಇದೆ. ಆದರೆ ಅದರಿಂದ ಸರ್ಕಾರಿ ಆಸ್ಪತ್ರೆಗಳ ಸೇವೆಗೆ ತೊಂದರೆ ಆಗಬಾರದೆಂಬ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದರು.

ಜಯನಗರ ಆಸ್ಪತ್ರೆಯಲ್ಲಿ ರೇಡಿಯೋಲಾಜಿಸ್ಟ್ ಕೊರತೆ ಇದೆ ಎಂದು ಹೇಳಲಾಗಿದೆ. ಒಂದು ವಾರದೊಳಗಾಗಿ ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲಾಗುತ್ತಿದೆ ಎಂದರು.

ದಕ್ಷಿಣ ಭಾರತದ ರಾಜ್ಯದಲ್ಲಿ ತಮಿಳುನಾಡು, ಕೇರಳಗಿಂತಲೂ ರಾಜ್ಯದ ಆರೋಗ್ಯ ಸೇವೆ ಹಿಂದುಳಿದಿರುವ ಬಗ್ಗೆ ವರದಿಯಿದೆ. ಇದನ್ನು ಸುಧಾರಿಸಲು ಸಾಕಷ್ಟು ಕ್ರಮ ಕೈಗೊಳ್ಳಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ವ್ಯವಸ್ಥೆ ಕಲ್ಪಿಸಿ ಜೀವನಶೈಲಿ ಹಾಗೂ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು. ಏಕ ಬಳಕೆಯ ಡಯಾಲಿಸಿಸ್ ಸೇವೆ, 108 ತುರ್ತು ಸಹಾಯವಾಣಿ ಸುಧಾರಣೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ಶಾಸಕ ಸಿ.ಕೆ.ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಚಿವರ ಪರಿಶೀಲನೆ ವೇಳೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ವರ್ಗಾವಣೆಗೆ ಪತ್ರ ನೀಡಿದಾಗ ಸಚಿವರು ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago