Mysore
30
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್  ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.

ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ