ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.
ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…