ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ.
ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು, ಈ ಬೇಡಿಕೆಗಳಲ್ಲಿ ಪ್ರಮುಖವಾಗಿ ವೇತನ ಪರಿಷ್ಕರಣೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಮಾಜದ ಪ್ರಜ್ಞಾವಂತಿಕೆ ಹಾಗೂ ಗ್ರಾಮೀಣ ಯುವಜನರ ಉಜ್ವಲ ಭವಿಷ್ಯದ ಅವಕಾಶಕ್ಕೆ ಸಹಾಯಕವಾಗಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು “ಅರಿವು ಕೇಂದ್ರ” ಗಳಾಗಿ ಕಾರ್ಯ ನಿರ್ವಹಿಸಬೇಕು, ಗ್ರಂಥಪಾಲಕರ ಕೆಲಸದ ಸಮಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದ್ದಾರೆ.
ಹೆಚ್ಚುವರಿ ಗಂಟೆಗಳು ಹಾಗೂ ವಿಭಜಿತ ಸಮಯವನ್ನು ಗಮನದಲ್ಲಿರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಕನಿಷ್ಠ ಮಾಸಿಕ ಮೂಲ ವೇತನವನ್ನು ನಿಗದಿಪಡಿಸಿ ಜೊತೆಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ತೆಯನ್ನು ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬಸವಣ್ಣನವರ ‘ಅರಿವೇ ಗುರು’ ತತ್ವದ ಆಶಯದಂತೆ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸಮೃದ್ಧ ಸಮಾಜ ನಿರ್ಮಿಸಲು, ಸ್ಥಿರ ಸಮಾಜದ ಅಗತ್ಯವಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ. ನಾಡಿನ ಗ್ರಂಥಾಲಯ ಹಾಗೂ ಇವುಗಳನ್ನು ಪೂರ್ಣಬಳಕೆಗೆ ಸನ್ನದ್ಧಗೊಳಿಸುವ ಗ್ರಂಥಪಾಲಕರನ್ನು ಸಬಲೀಕರಣಗೊಳಿಸಲು ಹೊರಡಿಸಲಾಗಿರುವ ಈ ಆದೇಶ ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ನಮ್ಮ ಸರಕಾರದ ಬದ್ಧತೆಯ ಪ್ರತೀಕವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…