BREAKING NEWS

ಗ್ರಾ.ಪಂ. ಗ್ರಂಥಪಾಲಕರಿಗೆ ಕನಿಷ್ಠ ವೇತನ ನಿಗದಿ ಪಡಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನವನ್ನು ಹೆಚ್ಚಿಸಿ ಗುರುವಾರ ರಾಜ್ಯ ಸರಕಾರ ಆದೇಶಿಸಿದೆ.

ಕಳೆದ ಜು.27ರಂದು ರಾಜ್ಯ ಗ್ರಾಮ ಪಂಚಾಯತಿ ಗ್ರಂಥಾಲಯಗಳ ಗ್ರಂಥಪಾಲಕರ ಸಂಘದ ಪ್ರತಿನಿಧಿಗಳು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ತಮ್ಮ ಹಲವಾರು ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು, ಈ ಬೇಡಿಕೆಗಳಲ್ಲಿ ಪ್ರಮುಖವಾಗಿ ವೇತನ ಪರಿಷ್ಕರಣೆಯ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸಮಾಜದ ಪ್ರಜ್ಞಾವಂತಿಕೆ ಹಾಗೂ ಗ್ರಾಮೀಣ ಯುವಜನರ ಉಜ್ವಲ ಭವಿಷ್ಯದ ಅವಕಾಶಕ್ಕೆ ಸಹಾಯಕವಾಗಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು “ಅರಿವು ಕೇಂದ್ರ” ಗಳಾಗಿ ಕಾರ್ಯ ನಿರ್ವಹಿಸಬೇಕು, ಗ್ರಂಥಪಾಲಕರ ಕೆಲಸದ ಸಮಯವನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದ್ದಾರೆ.

ಹೆಚ್ಚುವರಿ ಗಂಟೆಗಳು ಹಾಗೂ ವಿಭಜಿತ ಸಮಯವನ್ನು ಗಮನದಲ್ಲಿರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಕನಿಷ್ಠ ಮಾಸಿಕ ಮೂಲ ವೇತನವನ್ನು ನಿಗದಿಪಡಿಸಿ ಜೊತೆಗೆ ಕಾರ್ಮಿಕ ಇಲಾಖೆ ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ತೆಯನ್ನು ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬಸವಣ್ಣನವರ ‘ಅರಿವೇ ಗುರು’ ತತ್ವದ ಆಶಯದಂತೆ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳನ್ನಾಗಿ ಮಾರ್ಪಡಿಸಿ ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಗ್ರಾಮೀಣ ವಿಶ್ವವಿದ್ಯಾಲಯಗಳಂತೆ ರೂಪಿಸಲು ಈ ಮಹತ್ವಾಕಾಂಕ್ಷಿ ಹೆಜ್ಜೆ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಸಮೃದ್ಧ ಸಮಾಜ ನಿರ್ಮಿಸಲು, ಸ್ಥಿರ ಸಮಾಜದ ಅಗತ್ಯವಿದೆ. ಸ್ಥಿರ ಸಮಾಜ ನಿರ್ಮಾಣವಾಗಲು ಪ್ರಬುದ್ಧ ಸಮಾಜದ ಅಗತ್ಯವಿದೆ. ನಾಡಿನ ಗ್ರಂಥಾಲಯ ಹಾಗೂ ಇವುಗಳನ್ನು ಪೂರ್ಣಬಳಕೆಗೆ ಸನ್ನದ್ಧಗೊಳಿಸುವ ಗ್ರಂಥಪಾಲಕರನ್ನು ಸಬಲೀಕರಣಗೊಳಿಸಲು ಹೊರಡಿಸಲಾಗಿರುವ ಈ ಆದೇಶ ಪ್ರಬುದ್ಧ ಸಮಾಜದ ನಿರ್ಮಾಣಕ್ಕೆ ನಮ್ಮ ಸರಕಾರದ ಬದ್ಧತೆಯ ಪ್ರತೀಕವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago