ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನ ಹೊಂದಿದ್ದಾರೆ.
ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಉಮಾ ಗೋಪಾಲರಾಜ ಅರಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕುವೆಂಪುನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.53 ರ ಸುಮಾರಿಗೆ ಕೊನೆಯುಸಿರೆಳೆದ್ದಾರೆ.
ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಗೋಪಾಲರಾಜ ಅರಸು ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ದಿವ್ಯಲಕ್ಷ್ಮಿ ಅರಸ್, ಪ್ರಶಾಂತ್ ಗೋಪಾಲ್ ರಾಜ್ ಅರಸ್ ಮತ್ತು ಪ್ರಧಾನ್ ಗೋಪಾಲ್ ರಾಜ್ ಅರಸ್, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಸಂಬಂಧಿಕರು ಮತ್ತು ಸ್ನೇಹಿತರು ದುಃಖದಲ್ಲಿ ಮುಳುಗಿದ್ದಾರೆ.
ಮದನ್ ಗೋಪಾಲ್ ರಾಜ್ ಅರಸ್ ಅವರು ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬಳಿಯ ಕೋಟೆ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೈಸೂರಿನ ಹಿಂದಿನ ಮಹಾರಾಜ ಚಾಮರಾಜ ಒಡೆಯರ್ ಅವರು ಇವರಿಗೆ ಸೇರಿದವರು. ಅವರನ್ನು ಆಗಿನ ರಾಜ ಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ಉತ್ತರಾಧಿಕಾರಿಯಾಗಿ ದತ್ತು ಪಡೆದ್ದರು.
ಮದನ್ ಗೋಪಾಲ್ ರಾಜ್ ಅರಸ್ ಅವರ ಪೂರ್ವಜರು ಚಾಮರಾಜ ಅರಸು ಅವರ ಹಿರಿಯ ಸಹೋದರರು. ಹಳೆಯ ಸಂಪ್ರದಾದಂತೆ ಕುಟುಂಬವು ಗೋಪಾಲಸ್ವಾಮಿ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಕೈಗೊಳ್ಳಲಿದೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…