BREAKING NEWS

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅಜ್ಜಿ ನಿಧನ

ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನ ಹೊಂದಿದ್ದಾರೆ.

ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಉಮಾ ಗೋಪಾಲರಾಜ ಅರಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕುವೆಂಪುನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.53 ರ ಸುಮಾರಿಗೆ ಕೊನೆಯುಸಿರೆಳೆದ್ದಾರೆ.

ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಗೋಪಾಲರಾಜ ಅರಸು ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ದಿವ್ಯಲಕ್ಷ್ಮಿ ಅರಸ್, ಪ್ರಶಾಂತ್ ಗೋಪಾಲ್ ರಾಜ್ ಅರಸ್ ಮತ್ತು ಪ್ರಧಾನ್ ಗೋಪಾಲ್ ರಾಜ್ ಅರಸ್, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಸಂಬಂಧಿಕರು ಮತ್ತು ಸ್ನೇಹಿತರು ದುಃಖದಲ್ಲಿ ಮುಳುಗಿದ್ದಾರೆ.

ಮದನ್ ಗೋಪಾಲ್ ರಾಜ್ ಅರಸ್​ ಅವರು ಗುಂಡ್ಲುಪೇಟೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬಳಿಯ ಕೋಟೆ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೈಸೂರಿನ ಹಿಂದಿನ ಮಹಾರಾಜ ಚಾಮರಾಜ ಒಡೆಯರ್ ಅವರು ಇವರಿಗೆ ಸೇರಿದವರು. ಅವರನ್ನು ಆಗಿನ ರಾಜ ಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ಉತ್ತರಾಧಿಕಾರಿಯಾಗಿ ದತ್ತು ಪಡೆದ್ದರು.

ಮದನ್ ಗೋಪಾಲ್ ರಾಜ್ ಅರಸ್ ಅವರ ಪೂರ್ವಜರು ಚಾಮರಾಜ ಅರಸು ಅವರ ಹಿರಿಯ ಸಹೋದರರು. ಹಳೆಯ ಸಂಪ್ರದಾದಂತೆ ಕುಟುಂಬವು ಗೋಪಾಲಸ್ವಾಮಿ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು  ಕೈಗೊಳ್ಳಲಿದೆ.

andolanait

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

1 hour ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

1 hour ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

5 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

10 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

10 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

10 hours ago