ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಟ್ವಿಟರ್ ಖಾತೆಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಅದು ಇಲಾಖೆಯ ಸಿಬ್ಬಂದಿಯ ಅಚಾತುರ್ಯದಿಂದ ನಡೆದಿದೆʼʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಇದೊಂದು ಗಂಭೀರ ವಿಚಾರ. ನಮ್ಮ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯಿಂದ ಯಾರು ಈ ಮಾಹಿತಿಯನ್ನು ನೀಡಿದ್ದಾರೋ, ಅವರಿಗೆ ನೋಟಿಸ್ ನೀಡುತ್ತೇನೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆʼʼ ಎಂದು ತಿಳಿಸಿದರು.
ʼʼಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆʼʼ
ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ನಿಂದ ಮಾತ್ರ ಹಣ ಸ್ಲೋ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಅದು ಸ್ಥಗಿತಗೊಳ್ಳಲ್ಲ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ಸಚಿವರು ತಿಳಿಸಿದರು.
ಟ್ವೀಟ್ ಮಾಡಿ ಡಿಲಿಟ್ ಮಾಡಿದ ಇಲಾಖೆ
ಹೊಸ ನೋಂದಣಿಯನ್ನು ಸ್ಥಗಿತಗೊಳಿಸಿರುವ ಕುರಿತ ಟ್ವೀಟ್ ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸದ್ಯ ಡಿಲಿಟ್ ಮಾಡಿತ್ತು. ಇದೀಗ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಇಲಾಖೆಯ ವಿರುದ್ಧ ಅಸಮಾಧಾನ
ಸರಕಾರದ ಮಹತ್ವದ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…