BREAKING NEWS

ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಟ್ವಿಟರ್‌ ಖಾತೆಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಅದು ಇಲಾಖೆಯ ಸಿಬ್ಬಂದಿಯ ಅಚಾತುರ್ಯದಿಂದ ನಡೆದಿದೆʼʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಇದೊಂದು ಗಂಭೀರ ವಿಚಾರ. ನಮ್ಮ ಇಲಾಖೆಯ ಅಧಿಕೃತ ಟ್ವಿಟರ್‌ ಖಾತೆಯಿಂದ ಯಾರು ಈ ಮಾಹಿತಿಯನ್ನು ನೀಡಿದ್ದಾರೋ, ಅವರಿಗೆ ನೋಟಿಸ್‌ ನೀಡುತ್ತೇನೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆʼʼ ಎಂದು ತಿಳಿಸಿದರು.

ʼʼಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆʼʼ

ನಮ್ಮ ಇಲಾಖೆಯಿಂದ ಈಗಾಗಲೇ ಹಣ ವರ್ಗಾವಣೆ ಆಗಿದೆ. ಬ್ಯಾಂಕ್​ನಿಂದ ಮಾತ್ರ ಹಣ ಸ್ಲೋ ಆಗಿದೆ. ಇನ್ನು ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗುತ್ತೆ. ನಿಧಾನವಾಗಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆಗುತ್ತಿದೆ. ಫಲಾನುಭವಿಗಳಿಗೆ ನಮ್ಮ ಇಲಾಖೆಯಿಂದ ಹಣ ಕಳುಹಿಸುತ್ತಿದ್ದೇವೆ. ಹೊಸದಾಗಿ ನೋಂದಣಿ ಮಾಡಿಕೊಂಡವರಿಗೂ ಲಾಭ ಸಿಗುತ್ತಿದೆ. ಅದು ಸ್ಥಗಿತಗೊಳ್ಳಲ್ಲ. ಗೃಹಲಕ್ಷ್ಮೀ ನಿರಂತರವಾಗಿ ನಡೆಯುವ ಯೋಜನೆ ಎಂದು ಸಚಿವರು ತಿಳಿಸಿದರು.

ಟ್ವೀಟ್‌ ಮಾಡಿ ಡಿಲಿಟ್‌ ಮಾಡಿದ ಇಲಾಖೆ

ಹೊಸ ನೋಂದಣಿಯನ್ನು ಸ್ಥಗಿತಗೊಳಿಸಿರುವ ಕುರಿತ ಟ್ವೀಟ್‌ ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸದ್ಯ ಡಿಲಿಟ್‌ ಮಾಡಿತ್ತು. ಇದೀಗ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇಲಾಖೆಯ ವಿರುದ್ಧ ಅಸಮಾಧಾನ

ಸರಕಾರದ ಮಹತ್ವದ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಯ ಬಗ್ಗೆ ತಪ್ಪು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ವಿರುದ್ಧ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ.

andolanait

Recent Posts

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

42 seconds ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

1 hour ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

4 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

5 hours ago