BREAKING NEWS

ಗೃಹಲಕ್ಷ್ಮಿ ಯೋಜನೆ : ಬೆಟ್ಟದ ತಾಯಿಗೆ ಸೇರಿದ 59 ತಿಂಗಳ ಹಣ

ಮೈಸೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ಸಾವಿರ ಹಣವನ್ನು ನಾಡ ದೇವಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿದೆ.

ನಾಡ ಅಧಿದೇವತೆ ಚಾಂಮುಡೇಶ್ವರಿಗೆ ಗೃಹಲಕ್ಷ್ಮಿ ಯೋಜನೆಯ 59 ತಿಂಗಳ 1,18,000 ರೂ ಹಣವನ್ನು ಅರ್ಪಿಸಲಾಗಿದೆ.

ಈ ಸಂಬಂಧ ದಿನೇಶ್‌ ಗೂಳಿಗೌಡ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗರ ಪತ್ರ ಬರೆದು ಚಾಮುಂಡೇಶ್ವರಿ ದೇವಿಗೆ ಪ್ರತಿ ತಿಂಗಳೂ ಗೃಹಲಕ್ಷ್ಮೀ ಯೋಜನೆಯ ಹಣವನ್ನು ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಕ್ರಮ ವಹಿಸುವಂತೆ ಡಿಕೆ. ಶಿವಕುಮಾರ್‌ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದ್ದರು. ಇದೀಗ ಗೃಹಲಕ್ಷ್ಮೀ ಯೋಜನೆಯ ಪ್ರತಿ ತಿಂಗಳ ಹಣ ದೇವಿಯ ಬಳಿ ತಲುಪಲು ವ್ಯವಸ್ಥೆಯಾಗಿದೆ. 59 ತಿಂಗಳ 1,18,000 ರೂ ಹಣವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೆಸರಿನಲ್ಲಿ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಸಂದಾಯ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ವಯಕ್ತಿಕ ಹಣವನ್ನು ದೇವಾಲಯಕ್ಕೆ ಅರ್ಪಿಸಿದ್ದಾರೆ.

ಇನ್ನೂ ದೇವಾಲಯಕ್ಕೆ ಹಣ ಸಂದಾಯವಾಗಿರುವ ರಶೀದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಐದು ವರ್ಷಗಳ ಕಂತನ್ನು ನನ್ನ ಪರವಾಗಿ ದಿನೇಶ್‌ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ವೈಯಕ್ತಿಕವಾಗಿ ಸಲ್ಲಿಸಿದ್ದೇನೆ. ಈಗಾಗಲೇ ಮೊದಲ ಕಂತನ್ನು ಸಿಎಂ ಸಿದ್ದರಾಮಯ್ಯನವರು, ಡಿಸಿಎಂ ಡಿ.ಕೆ.ಶಿವಕುಮಾರ್ ರವರು ಸಲ್ಲಿಸಿದ್ದರು.

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ.

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ.‌ ಎಂದು ಬರೆದುಕೊಂಡಿದ್ದಾರೆ.

 

lokesh

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

27 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

1 hour ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago