ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.
ಮೊದಲ ದಿನ ಅಂದರೆ ಜುಲೈ 19ರಂದು ಕೇವಲ 60,000 ಮಹಿಳೆಯರು ಮಾತ್ರ ನೋಂದಣಿ ಮಾಡಿಸಿಕೊಂಡಿದ್ದರೆ, ಎರಡನೇ ದಿನವಾದ ಶುಕ್ರವಾರ (ಜುಲೈ 21) 7.77 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ನಿನ್ನೆ (ಜುಲೈ 22) ಮೂರನೇ ದಿನವಾದ ಶನಿವಾರ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 14,16,462 ಮನೆ ಒಡತಿಯರು ಅರ್ಜಿ ಹಾಕಿದ್ದಾರೆ.
ಈ ಮೂಲಕ ಮೂರು ದಿನದಲ್ಲಿ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಭಾನುವಾರ ಆಗಿರುವುದರಿಂದ ಗೃಹಲಕ್ಷ್ಮಿ ಅರ್ಜಿ ನೋಂದಣಿ ಇಲ್ಲ ಇರುವುದಿಲ್ಲ.
ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದ್ದು, ಇನ್ನೂ ಲಕ್ಷಾಂತರ ಮಹಿಳೆಯರು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದ್ದಾರೆ. ಆದ್ರೆ, ಆರಂಭದಿಂದಲೇ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒನ್, ಗ್ರಾಮ ಒನ್ , ಕರ್ನಾಟಕ ಒನ್ ಸೆಂಟರ್ ಗಳಲ್ಲಿ ಸರ್ವರ್ ಬ್ಯುಸಿ ಬರುತ್ತಿದೆ. ಒಟ್ಟು 1.20 ಕೋಟಿ ಗೃಹಿಣಿಯರು ಈ ಯೋಜನೆಯ ಫಲಾನುಭವಿಗಳಿದ್ದು, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 16ರಂದು 2000 ರೂಪಾಯಿ ಹಣವನ್ನು ಸರ್ಕಾರ ಜಮಾ ಮಾಡಲಿದೆ.
ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿದ್ದು, ಫಲಾನುಭವಿಗಳು 8147500500 ಸಂಖ್ಯೆಗೆ ರೇಷನ್ ಕಾರ್ಡ್ ನಂಬರ್ ಹಾಕಿ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಬೇಕು. ಬಳಿಕ ಯಾವಾಗ ಅರ್ಜಿಸಲ್ಲಿಸಬೇಕು? ಎಲ್ಲಿ ಎನ್ನುವ ಮಾಹಿತಿ ಬರುತ್ತದೆ. ನಂತರ ಅದೇ ಪ್ರಕಾರ ಹೋಗಿ ನೊಂದಣಿ ಮಾಡಿಕೊಳ್ಳಬೇಕು. ಆದ್ರೆ, ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ 81475 00500 ಸಂಖ್ಯೆಗೆ ಮೆಸೇಜ್ ಮಾಡಬೇಕು ಎಂಬ ಮಾಹಿತಿ ಅರಿತು, ಅದರಂತೆ ಮೆಸೇಜ್ ಕಳಿಸಿದರೂ ಸಕಾಲಕ್ಕೆ ರಿಪ್ಲೈ ಬರುತ್ತಿಲ್ಲ ಎನ್ನುವ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಸದ್ಯ ಜಿಲ್ಲೆ ಜಿಲ್ಲೆಗಳಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸೇವಾ ಕೇಂದ್ರಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…