BREAKING NEWS

ಗೃಹಲಕ್ಷ್ಮೀ ಯೋಜನೆ: ಈವರೆಗೆ 22.90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಮೊದಲ ದಿನ ಅಂದರೆ ಜುಲೈ 19ರಂದು ಕೇವಲ 60,000 ಮಹಿಳೆಯರು ಮಾತ್ರ ನೋಂದಣಿ ಮಾಡಿಸಿಕೊಂಡಿದ್ದರೆ, ಎರಡನೇ ದಿನವಾದ ಶುಕ್ರವಾರ (ಜುಲೈ 21) 7.77 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ನಿನ್ನೆ (ಜುಲೈ 22) ಮೂರನೇ ದಿನವಾದ ಶನಿವಾರ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 14,16,462 ಮನೆ ಒಡತಿಯರು ಅರ್ಜಿ ಹಾಕಿದ್ದಾರೆ.

ಈ ಮೂಲಕ ಮೂರು ದಿನದಲ್ಲಿ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.  ಇಂದು ಭಾನುವಾರ ಆಗಿರುವುದರಿಂದ ಗೃಹಲಕ್ಷ್ಮಿ ಅರ್ಜಿ ನೋಂದಣಿ ಇಲ್ಲ ಇರುವುದಿಲ್ಲ.

ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದ್ದು, ಇನ್ನೂ ಲಕ್ಷಾಂತರ ಮಹಿಳೆಯರು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದ್ದಾರೆ. ಆದ್ರೆ, ಆರಂಭದಿಂದಲೇ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒನ್, ಗ್ರಾಮ ಒನ್ , ಕರ್ನಾಟಕ ಒನ್ ಸೆಂಟರ್ ಗಳಲ್ಲಿ ಸರ್ವರ್ ಬ್ಯುಸಿ ಬರುತ್ತಿದೆ. ಒಟ್ಟು 1.20 ಕೋಟಿ ಗೃಹಿಣಿಯರು ಈ ಯೋಜನೆಯ ಫಲಾನುಭವಿಗಳಿದ್ದು, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 16ರಂದು 2000 ರೂಪಾಯಿ ಹಣವನ್ನು ಸರ್ಕಾರ ಜಮಾ ಮಾಡಲಿದೆ.

ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿದ್ದು, ಫಲಾನುಭವಿಗಳು 8147500500 ಸಂಖ್ಯೆಗೆ ರೇಷನ್ ಕಾರ್ಡ್​ ನಂಬರ್ ಹಾಕಿ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಬೇಕು. ಬಳಿಕ ಯಾವಾಗ ಅರ್ಜಿಸಲ್ಲಿಸಬೇಕು? ಎಲ್ಲಿ ಎನ್ನುವ ಮಾಹಿತಿ ಬರುತ್ತದೆ. ನಂತರ ಅದೇ ಪ್ರಕಾರ ಹೋಗಿ ನೊಂದಣಿ ಮಾಡಿಕೊಳ್ಳಬೇಕು. ಆದ್ರೆ, ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ 81475 00500 ಸಂಖ್ಯೆಗೆ ಮೆಸೇಜ್ ಮಾಡಬೇಕು ಎಂಬ ಮಾಹಿತಿ ಅರಿತು, ಅದರಂತೆ ಮೆಸೇಜ್ ಕಳಿಸಿದರೂ ಸಕಾಲಕ್ಕೆ ರಿಪ್ಲೈ ಬರುತ್ತಿಲ್ಲ ಎನ್ನುವ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಸದ್ಯ ಜಿಲ್ಲೆ ಜಿಲ್ಲೆಗಳಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸೇವಾ ಕೇಂದ್ರಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

7 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

8 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

9 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

10 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

10 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

10 hours ago