BREAKING NEWS

ಗೃಹಲಕ್ಷ್ಮೀ ಯೋಜನೆ: ಈವರೆಗೆ 22.90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಮೊದಲ ದಿನ ಅಂದರೆ ಜುಲೈ 19ರಂದು ಕೇವಲ 60,000 ಮಹಿಳೆಯರು ಮಾತ್ರ ನೋಂದಣಿ ಮಾಡಿಸಿಕೊಂಡಿದ್ದರೆ, ಎರಡನೇ ದಿನವಾದ ಶುಕ್ರವಾರ (ಜುಲೈ 21) 7.77 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ನಿನ್ನೆ (ಜುಲೈ 22) ಮೂರನೇ ದಿನವಾದ ಶನಿವಾರ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 14,16,462 ಮನೆ ಒಡತಿಯರು ಅರ್ಜಿ ಹಾಕಿದ್ದಾರೆ.

ಈ ಮೂಲಕ ಮೂರು ದಿನದಲ್ಲಿ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.  ಇಂದು ಭಾನುವಾರ ಆಗಿರುವುದರಿಂದ ಗೃಹಲಕ್ಷ್ಮಿ ಅರ್ಜಿ ನೋಂದಣಿ ಇಲ್ಲ ಇರುವುದಿಲ್ಲ.

ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದ್ದು, ಇನ್ನೂ ಲಕ್ಷಾಂತರ ಮಹಿಳೆಯರು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದ್ದಾರೆ. ಆದ್ರೆ, ಆರಂಭದಿಂದಲೇ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒನ್, ಗ್ರಾಮ ಒನ್ , ಕರ್ನಾಟಕ ಒನ್ ಸೆಂಟರ್ ಗಳಲ್ಲಿ ಸರ್ವರ್ ಬ್ಯುಸಿ ಬರುತ್ತಿದೆ. ಒಟ್ಟು 1.20 ಕೋಟಿ ಗೃಹಿಣಿಯರು ಈ ಯೋಜನೆಯ ಫಲಾನುಭವಿಗಳಿದ್ದು, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 16ರಂದು 2000 ರೂಪಾಯಿ ಹಣವನ್ನು ಸರ್ಕಾರ ಜಮಾ ಮಾಡಲಿದೆ.

ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿದ್ದು, ಫಲಾನುಭವಿಗಳು 8147500500 ಸಂಖ್ಯೆಗೆ ರೇಷನ್ ಕಾರ್ಡ್​ ನಂಬರ್ ಹಾಕಿ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಬೇಕು. ಬಳಿಕ ಯಾವಾಗ ಅರ್ಜಿಸಲ್ಲಿಸಬೇಕು? ಎಲ್ಲಿ ಎನ್ನುವ ಮಾಹಿತಿ ಬರುತ್ತದೆ. ನಂತರ ಅದೇ ಪ್ರಕಾರ ಹೋಗಿ ನೊಂದಣಿ ಮಾಡಿಕೊಳ್ಳಬೇಕು. ಆದ್ರೆ, ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ 81475 00500 ಸಂಖ್ಯೆಗೆ ಮೆಸೇಜ್ ಮಾಡಬೇಕು ಎಂಬ ಮಾಹಿತಿ ಅರಿತು, ಅದರಂತೆ ಮೆಸೇಜ್ ಕಳಿಸಿದರೂ ಸಕಾಲಕ್ಕೆ ರಿಪ್ಲೈ ಬರುತ್ತಿಲ್ಲ ಎನ್ನುವ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಸದ್ಯ ಜಿಲ್ಲೆ ಜಿಲ್ಲೆಗಳಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸೇವಾ ಕೇಂದ್ರಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago