ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.
ಮೊದಲ ದಿನ ಅಂದರೆ ಜುಲೈ 19ರಂದು ಕೇವಲ 60,000 ಮಹಿಳೆಯರು ಮಾತ್ರ ನೋಂದಣಿ ಮಾಡಿಸಿಕೊಂಡಿದ್ದರೆ, ಎರಡನೇ ದಿನವಾದ ಶುಕ್ರವಾರ (ಜುಲೈ 21) 7.77 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ನಿನ್ನೆ (ಜುಲೈ 22) ಮೂರನೇ ದಿನವಾದ ಶನಿವಾರ ಗೃಹಲಕ್ಷ್ಮೀ ಯೋಜನೆಗೆ ಬರೋಬ್ಬರಿ 14,16,462 ಮನೆ ಒಡತಿಯರು ಅರ್ಜಿ ಹಾಕಿದ್ದಾರೆ.
ಈ ಮೂಲಕ ಮೂರು ದಿನದಲ್ಲಿ ಒಟ್ಟಾರೆ 22.90,782 ಮಹಿಳಯರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಭಾನುವಾರ ಆಗಿರುವುದರಿಂದ ಗೃಹಲಕ್ಷ್ಮಿ ಅರ್ಜಿ ನೋಂದಣಿ ಇಲ್ಲ ಇರುವುದಿಲ್ಲ.
ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದ್ದು, ಇನ್ನೂ ಲಕ್ಷಾಂತರ ಮಹಿಳೆಯರು ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದ್ದಾರೆ. ಆದ್ರೆ, ಆರಂಭದಿಂದಲೇ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒನ್, ಗ್ರಾಮ ಒನ್ , ಕರ್ನಾಟಕ ಒನ್ ಸೆಂಟರ್ ಗಳಲ್ಲಿ ಸರ್ವರ್ ಬ್ಯುಸಿ ಬರುತ್ತಿದೆ. ಒಟ್ಟು 1.20 ಕೋಟಿ ಗೃಹಿಣಿಯರು ಈ ಯೋಜನೆಯ ಫಲಾನುಭವಿಗಳಿದ್ದು, ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಆಗಸ್ಟ್ 16ರಂದು 2000 ರೂಪಾಯಿ ಹಣವನ್ನು ಸರ್ಕಾರ ಜಮಾ ಮಾಡಲಿದೆ.
ಪಡಿತರ ಕಾರ್ಡ್ ಸಂಖ್ಯೆ, ಯಜಮಾನಿ ಮತ್ತು ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಅಗತ್ಯವಿದ್ದು, ಫಲಾನುಭವಿಗಳು 8147500500 ಸಂಖ್ಯೆಗೆ ರೇಷನ್ ಕಾರ್ಡ್ ನಂಬರ್ ಹಾಕಿ ಎಸ್ ಎಂಎಸ್ ಮೂಲಕ ಸಂದೇಶ ಕಳುಹಿಸಬೇಕು. ಬಳಿಕ ಯಾವಾಗ ಅರ್ಜಿಸಲ್ಲಿಸಬೇಕು? ಎಲ್ಲಿ ಎನ್ನುವ ಮಾಹಿತಿ ಬರುತ್ತದೆ. ನಂತರ ಅದೇ ಪ್ರಕಾರ ಹೋಗಿ ನೊಂದಣಿ ಮಾಡಿಕೊಳ್ಳಬೇಕು. ಆದ್ರೆ, ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ 81475 00500 ಸಂಖ್ಯೆಗೆ ಮೆಸೇಜ್ ಮಾಡಬೇಕು ಎಂಬ ಮಾಹಿತಿ ಅರಿತು, ಅದರಂತೆ ಮೆಸೇಜ್ ಕಳಿಸಿದರೂ ಸಕಾಲಕ್ಕೆ ರಿಪ್ಲೈ ಬರುತ್ತಿಲ್ಲ ಎನ್ನುವ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಸದ್ಯ ಜಿಲ್ಲೆ ಜಿಲ್ಲೆಗಳಲ್ಲೂ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಡೆಯುತ್ತಿದ್ದು, ಸೇವಾ ಕೇಂದ್ರಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…