BREAKING NEWS

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಷರತ್ತು ವಿಧಿಸಿದ ಸರ್ಕಾರ!

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವುದು ಕಂಡು ಬಂದಿದೆ.

 

ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.

ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.

ಅದರೊಂದಿಗೆ ಜಾತಿ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಸ್ಥಳವನ್ನು ನೀಡಲಾಗಿದೆ.

ಈ ಅರ್ಜಿಯನ್ನು ತುಂಬಿ ಜೊತೆಗೆ, ಮನೆ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಪ್ರತಿಯನ್ನು ಲಗತ್ತಿಸಬೇಕು. ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನೂ ಲಗತ್ತಿಸಬೇಕು.

ಕೊನೆಗೆ ಸ್ವಯಂ ಘೋಷಣೆ ಒಂದಕ್ಕೆ ಸಹಿ ಹಾಕಬೇಕಾಗಿದ್ದು, ಅದರಲ್ಲಿ ಮನೆಯೊಡತಿ, ನಾನು ಮತ್ತು ನನ್ನ ಪತಿಯು ಅದಾಯ ತೆರಿಗೆ/ ಜಿಎಸ್‌ಟಿ ಪಾವತಿದಾರರಾಗಿರುವುದಿಲ್ಲ. ನಾನು ಒದಗಿಸಿರುವ ಎಲ್ಲಾ ವಿವರಗಳು ನನ್ನ ತಿಳುವಳಿಕೆಯಂತೆ ಸಮರ್ಪಕವಾಗಿದೆ. ನನ್ನ ಕುಟುಂಬ ಮನೆಯಲ್ಲಿ ನಾನೇ ಮನೆ ಒಡತಿಯಾಗಿರುತ್ತೇನೆ. ನಾನು ಒದಗಿಸಿರುವ ಮಾಹಿತಿಯು ಯಾವುದೇ ಕಾಲದಲ್ಲಿ, ಸುಳ್ಳೆಂದು ಕಂಡು ಬಂದರೆ ಕಾನೂನಿನ ಕ್ರಮಕ್ಕೆ ಒಳಗಾಗಲು ಹಾಗೂ ನಾನು ಪಡೆದ ಗೃಹಲಕ್ಷ್ಮೀ ಯೋಜನೆ ಸೌಲಭ್ಯವನ್ನು ಸರ್ಕಾರಕ್ಕೆ ಮರುಪಾವತಿಸಲು ಬದ್ಧಳಾಗಿರುತ್ತೇನೆಂದು ಈ ಮೂಲಕ ದೃಢೀಕರಿಸುತ್ತೇವೆ.” ಎಂಬ ಹೇಳಿಕೆಯನ್ನು ಒಪ್ಪಿ ಸಹಿ ಹಾಕಬೇಕಾಗಿರುತ್ತದೆ.

ಇದೇ ಮಾಹಿತಿಯನ್ನು ಆನ್ಲೈನ್ ಮೂಲಕ ಸಲ್ಲಿಸಿಯೂ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ ಜೂ.15ರಂದು ಕಾರ್ಯಾರಂಭವಾಗಬೇಕಿದೆ.

ಯೋಜನೆಗಿರುವ ಷರತ್ತುಗಳೇನು?
ಗೃಹ ಲಕ್ಷ್ಮಿ ಯೋಜನೆ (ಕುಟುಂಬದ ಪ್ರತಿ ಮಹಿಳೆಗೆ ತಿಂಗಳಿಗೆ ರೂ 2,000) ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರಂತೆ, ಮಹಿಳೆ ಅಥವಾ ಆಕೆಯ ಪತಿ ಜಿಎಸ್’ಟಿ, ಐಟಿ ಪಾವತಿಸುತ್ತಿದ್ದರೆ ಯೋಜನೆಗೆ ಅರ್ಹರಾಗಿರುವುದಿಲ್ಲ. ಬಿಪಿಎಲ್/ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆಂದು ತಿಳಿಸಲಾಗಿದೆ.

ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಕಾರ್ಡ್‌ಗಳಿಲ್ಲದ ಜನರು ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಅರ್ಹ ಫಲಾನುಭವಿಗಳು ತಮ್ಮ ಅರ್ಜಿಗಳನ್ನು ಜೂನ್ 15 ರಿಂದ ಜುಲೈ 15 ರೊಳಗೆ ಸಲ್ಲಿಸಬಹುದಾಗಿದೆ. ಜುಲೈ 15 ರ ನಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಗಸ್ಟ್ 15 ರಂದು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಮಹಿಳೆಯರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಅಧಿಕೃತ ಏಜೆನ್ಸಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

4 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

5 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

7 hours ago