BREAKING NEWS

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ: ಷರತ್ತು ವಿಧಿಸಿದ ಸರ್ಕಾರ!

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವುದು ಕಂಡು ಬಂದಿದೆ.

 

ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.

ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.

ಅದರೊಂದಿಗೆ ಜಾತಿ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಸ್ಥಳವನ್ನು ನೀಡಲಾಗಿದೆ.

ಈ ಅರ್ಜಿಯನ್ನು ತುಂಬಿ ಜೊತೆಗೆ, ಮನೆ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಪ್ರತಿಯನ್ನು ಲಗತ್ತಿಸಬೇಕು. ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನೂ ಲಗತ್ತಿಸಬೇಕು.

ಕೊನೆಗೆ ಸ್ವಯಂ ಘೋಷಣೆ ಒಂದಕ್ಕೆ ಸಹಿ ಹಾಕಬೇಕಾಗಿದ್ದು, ಅದರಲ್ಲಿ ಮನೆಯೊಡತಿ, ನಾನು ಮತ್ತು ನನ್ನ ಪತಿಯು ಅದಾಯ ತೆರಿಗೆ/ ಜಿಎಸ್‌ಟಿ ಪಾವತಿದಾರರಾಗಿರುವುದಿಲ್ಲ. ನಾನು ಒದಗಿಸಿರುವ ಎಲ್ಲಾ ವಿವರಗಳು ನನ್ನ ತಿಳುವಳಿಕೆಯಂತೆ ಸಮರ್ಪಕವಾಗಿದೆ. ನನ್ನ ಕುಟುಂಬ ಮನೆಯಲ್ಲಿ ನಾನೇ ಮನೆ ಒಡತಿಯಾಗಿರುತ್ತೇನೆ. ನಾನು ಒದಗಿಸಿರುವ ಮಾಹಿತಿಯು ಯಾವುದೇ ಕಾಲದಲ್ಲಿ, ಸುಳ್ಳೆಂದು ಕಂಡು ಬಂದರೆ ಕಾನೂನಿನ ಕ್ರಮಕ್ಕೆ ಒಳಗಾಗಲು ಹಾಗೂ ನಾನು ಪಡೆದ ಗೃಹಲಕ್ಷ್ಮೀ ಯೋಜನೆ ಸೌಲಭ್ಯವನ್ನು ಸರ್ಕಾರಕ್ಕೆ ಮರುಪಾವತಿಸಲು ಬದ್ಧಳಾಗಿರುತ್ತೇನೆಂದು ಈ ಮೂಲಕ ದೃಢೀಕರಿಸುತ್ತೇವೆ.” ಎಂಬ ಹೇಳಿಕೆಯನ್ನು ಒಪ್ಪಿ ಸಹಿ ಹಾಕಬೇಕಾಗಿರುತ್ತದೆ.

ಇದೇ ಮಾಹಿತಿಯನ್ನು ಆನ್ಲೈನ್ ಮೂಲಕ ಸಲ್ಲಿಸಿಯೂ ಯೋಜನೆಯ ಫಲಾನುಭವಿಗಳಾಗಬಹುದು. ಅದಕ್ಕೆ ಸಂಬಂಧಿಸಿದ ಅಧಿಕೃತ ವೆಬ್ಸೈಟ್ ಜೂ.15ರಂದು ಕಾರ್ಯಾರಂಭವಾಗಬೇಕಿದೆ.

ಯೋಜನೆಗಿರುವ ಷರತ್ತುಗಳೇನು?
ಗೃಹ ಲಕ್ಷ್ಮಿ ಯೋಜನೆ (ಕುಟುಂಬದ ಪ್ರತಿ ಮಹಿಳೆಗೆ ತಿಂಗಳಿಗೆ ರೂ 2,000) ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದರಂತೆ, ಮಹಿಳೆ ಅಥವಾ ಆಕೆಯ ಪತಿ ಜಿಎಸ್’ಟಿ, ಐಟಿ ಪಾವತಿಸುತ್ತಿದ್ದರೆ ಯೋಜನೆಗೆ ಅರ್ಹರಾಗಿರುವುದಿಲ್ಲ. ಬಿಪಿಎಲ್/ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ ಹೊಂದಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆಂದು ತಿಳಿಸಲಾಗಿದೆ.

ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಕಾರ್ಡ್‌ಗಳಿಲ್ಲದ ಜನರು ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಅರ್ಹ ಫಲಾನುಭವಿಗಳು ತಮ್ಮ ಅರ್ಜಿಗಳನ್ನು ಜೂನ್ 15 ರಿಂದ ಜುಲೈ 15 ರೊಳಗೆ ಸಲ್ಲಿಸಬಹುದಾಗಿದೆ. ಜುಲೈ 15 ರ ನಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಗಸ್ಟ್ 15 ರಂದು ಫಲಾನುಭವಿಗಳ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಮಹಿಳೆಯರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಅಧಿಕೃತ ಏಜೆನ್ಸಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

6 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

22 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago