BREAKING NEWS

ಮೈಸೂರಿನಲ್ಲಿ ಹಾಡಹಗಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೊಲೆಗೆ ಯತ್ನ!

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ.

ಮರಿಮಲ್ಲಪ್ಪ – ಅರಸು ರಸ್ತೆ ಮಾರ್ಗದಲ್ಲಿನ ಟೀ ಕ್ಯಾಂಟೀನ್‌ ಒಂದರಲ್ಲಿ ಸ್ನೇಹಿತರೊಂದಿಗೆ ಟೀ ಕುಡಿಯುತ್ತಾ ಕುಳಿತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಯುವಕನ ಮೂಲತಃ ಉದಯಗಿರಿಯ ನಿವಾಸಿ ಎನ್ನಲಾಗಿದ್ದು, ಹಬೀಬ್‌ ಎಂದು ಗುರುತಿಸಲಾಗಿದೆ. ಇನೋವಾ ಕಾರಿನಲ್ಲಿ ಬಂದ ಏಳೆಂಟು ಜನರ ಗುಂಪು ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳುವಿನ ಜತೆಗಿದ್ದ ಸ್ನೇಹಿತ ಸ್ಥಳೀಯರ ಸಹಾಯದೊಂದಿಗೆ ಗಾಯಾಳುವನ್ನು ಕೆಆರ್‌ ಆಸ್ಪತ್ರೆಗೆ ದಾಖಲಿಸಿದ್ದು, ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ದೇವರಾಜ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

andolana

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

7 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

15 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago