BREAKING NEWS

ಜಿಎಸ್‌ಟಿ ತಿದ್ದುಪಡಿ ಮಸೂದೆ ಅಂಗೀಕಾರ: ಆನ್‌ಲೈನ್ ಗೇಮಿಂಗ್ ಮೇಲೆ ಶೇ. 28 ರಷ್ಟು ತೆರಿಗೆ

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.

ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್‌ಲೈನ್ ಗೇಮಿಂಗ್‌ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ III ರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.

IGST ಕಾಯಿದೆಯಲ್ಲಿನ ತಿದ್ದುಪಡಿಯು ಆನ್‌ಲೈನ್ ಗೇಮಿಂಗ್‌ಗೆ GST ವಿಧಿಸುವ ನಿಬಂಧನೆಗೆ ಸಂಬಂಧಿಸಿದ್ದು. ಇಂತಹ ಗೇಮಿಂಗ್‌ ಘಟಕಗಳು ಭಾರತದಲ್ಲಿ GST ನೋಂದಣಿ ಮಾಡಿಸುವುದು ಅಗತ್ಯವಾಗಿದೆ.

ಇನ್ನು ವಿದೇಶಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್​​​ಗಳು ನೋಂದಣಿ ಮತ್ತು ತೆರಿಗೆ ಪಾವತಿಯ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಭಾರತದೊಳಗೆ ಈ ಗೇಮಿಂಗ್​​ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂಬುದನ್ನು ಈ ತಿದ್ದುಪಡಿಯಲ್ಲಿ ತಿಳಿಸಲಾಗಿದೆ.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

3 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

3 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

3 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

3 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

5 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

6 hours ago