BREAKING NEWS

ಜಿಎಸ್‌ಟಿ ತಿದ್ದುಪಡಿ ಮಸೂದೆ ಅಂಗೀಕಾರ: ಆನ್‌ಲೈನ್ ಗೇಮಿಂಗ್ ಮೇಲೆ ಶೇ. 28 ರಷ್ಟು ತೆರಿಗೆ

ನವದೆಹಲಿ: ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್‌ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್‌ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು ವಿರೋಧಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ GST ಮಸೂದೆ ಮಂಡಿಸಿದರು.

ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023, ಮತ್ತು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಕ್ಯಾಸಿನೊಗಳು, ಕುದುರೆ ರೇಸಿಂಗ್ ಮತ್ತು ಆನ್‌ಲೈನ್ ಗೇಮಿಂಗ್‌ ಮೇಲಿನ ತೆರಿಗೆ ಕುರಿತು ಸ್ಪಷ್ಟತೆ ನೀಡಲು, 2017 ರ CGST ಕಾಯಿದೆಯ ಶೆಡ್ಯೂಲ್ III ರಲ್ಲಿನ ನಿಬಂಧನೆಗಳಿಗೆ ತಿದ್ದುಪಡಿ ತರಲಾಗಿದೆ.

IGST ಕಾಯಿದೆಯಲ್ಲಿನ ತಿದ್ದುಪಡಿಯು ಆನ್‌ಲೈನ್ ಗೇಮಿಂಗ್‌ಗೆ GST ವಿಧಿಸುವ ನಿಬಂಧನೆಗೆ ಸಂಬಂಧಿಸಿದ್ದು. ಇಂತಹ ಗೇಮಿಂಗ್‌ ಘಟಕಗಳು ಭಾರತದಲ್ಲಿ GST ನೋಂದಣಿ ಮಾಡಿಸುವುದು ಅಗತ್ಯವಾಗಿದೆ.

ಇನ್ನು ವಿದೇಶಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್​​​ಗಳು ನೋಂದಣಿ ಮತ್ತು ತೆರಿಗೆ ಪಾವತಿಯ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಭಾರತದೊಳಗೆ ಈ ಗೇಮಿಂಗ್​​ಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುವುದು ಎಂಬುದನ್ನು ಈ ತಿದ್ದುಪಡಿಯಲ್ಲಿ ತಿಳಿಸಲಾಗಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago