ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.
ಕಾಂಗ್ರೆಸ್ 5 ಗ್ಯಾರಂಟಿ ಕಾರ್ಡ್ಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದೆ. ಅಲ್ಲದೇ ಗ್ಯಾರಂಟಿ ಕಾರ್ಡ್ಗಳಲ್ಲಿ ಸಿದ್ದರಾಮಯ್ಯ ಅವರ ಸಹಿ ಇದೆ. ಆದ್ದರಿಂದ ಅವರ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಎಂದು ಮನವಿ ಮಾಡಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…