BREAKING NEWS

ಗ್ಯಾರಂಟಿ ಯೋಜನೆಗಳು ಮಾರ್ಗಸೂಚಿಗೆ ಅನುಗುಣವಾಗಿವೆ: ಹೈಕೋರ್ಟ್‍ಗೆ ಸಿಎಂ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ ಐದು ಗ್ಯಾರಂಟಿಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಲಾಗಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‍ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.

ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ.ಎಂ.ಶಂಕರ್ ಎಂಬುವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿರುವ ಲಿಖಿತ ಪ್ರಮಾಣಪತ್ರದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲಿಖಿತ ಹೇಳಿಕೆಯನ್ನು ದಾಖಲೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತು.

ಏನಿದೆ ಲಿಖಿತ ಹೇಳಿಕೆಯಲ್ಲಿ?: ‘ಶಕ್ತಿ, ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಈ ಐದು ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯದ ಕೋಟ್ಯಂತರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ರೂಪಿಸಲಾಗಿದೆ. ರಾಜ್ಯದ ನಾಗರಿಕರ ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣ ಮತ್ತು ಉನ್ನತೀಕರಣದ ವಿಶಾಲ ಧ್ಯೇಯದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‍ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.

ಇದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಚುನಾವಣಾ ಪ್ರಣಾಳಿಕೆ ವೈಯುಕ್ತಿಕ ಘೋಷಣೆ ಆಗಿರುವುದಿಲ್ಲ. ಪಕ್ಷದ ಎಲ್ಲ ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ. ಚುನಾವಣಾ ಪ್ರಣಾಳಿಕೆಯ ಮಹತ್ವವನ್ನು ಎಸ್.ಆರ್.ಬೊಮ್ಮಾಯಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ 1994ರಲ್ಲಿ ಸುಪ್ರೀಂಕೋರ್ಟ್ ಪುನರುಚ್ಛರಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾ ನಕ್ಕೆ ತರುವ ಮೂಲಕ ಸರಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಸಿದ್ದರಾಮಯ್ಯ ತಮ್ಮ ಲಿಖಿತ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣಾ ಅಕ್ರಮ ನಡೆಸಲಾಗಿದೆ ಎಂಬ ಅರ್ಜಿದಾರರ ಆರೋಪ ಸಂಪೂರ್ಣ ಸುಳ್ಳು. ಅರ್ಜಿದಾರರ ಈ ವಾದವು ಪ್ರಜಾಪ್ರತಿನಿಧಿ ಕಾಯ್ದೆಯ ತತ್ವಗಳಿಗೆ ವಿರುದ್ಧವಾಗಿದೆ. ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುವ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ. ನನ್ನ ವಿರುದ್ಧವಲ್ಲದೇ ಕಾಂಗ್ರೆಸ್ ಪಕ್ಷದ ಅನೇಕ ಶಾಸಕರ ವಿರುದ್ಧ ಇದೇ ರೀತಿಯ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆಗೆ ಯೋಗ್ಯವಲ್ಲದ, ಸೂಕ್ತ ಕಾನೂನು ತಿಳುವಳಿಕೆ ಇಲ್ಲದ, ಕೇವಲ ಕ್ಷುಲ್ಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಸಲ್ಲಿಸಲಾಗಿರುವ ಇಂತಹ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಲಿಖಿತ ಹೇಳಿಕೆಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago