BREAKING NEWS

ಗ್ಯಾರಂಟಿ ಯೋಜನೆಗಳು ಮಾರ್ಗಸೂಚಿಗೆ ಅನುಗುಣವಾಗಿವೆ: ಹೈಕೋರ್ಟ್‍ಗೆ ಸಿಎಂ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ ಐದು ಗ್ಯಾರಂಟಿಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಲಾಗಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‍ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.

ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ನಿವಾಸಿ ಕೆ.ಎಂ.ಶಂಕರ್ ಎಂಬುವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಲ್ಲಿಸಿರುವ ಲಿಖಿತ ಪ್ರಮಾಣಪತ್ರದಲ್ಲಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಲಿಖಿತ ಹೇಳಿಕೆಯನ್ನು ದಾಖಲೆಗೆ ತೆಗೆದುಕೊಂಡ ನ್ಯಾಯಪೀಠ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತು.

ಏನಿದೆ ಲಿಖಿತ ಹೇಳಿಕೆಯಲ್ಲಿ?: ‘ಶಕ್ತಿ, ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಈ ಐದು ಕಲ್ಯಾಣ ಕಾರ್ಯಕ್ರಮಗಳನ್ನು ರಾಜ್ಯದ ಕೋಟ್ಯಂತರ ಕುಟುಂಬಗಳ ಶ್ರೇಯೋಭಿವೃದ್ಧಿಗೆ ರೂಪಿಸಲಾಗಿದೆ. ರಾಜ್ಯದ ನಾಗರಿಕರ ಹಾಗೂ ವಿಶೇಷವಾಗಿ ಮಹಿಳೆಯರ ಸಬಲೀಕರಣ ಮತ್ತು ಉನ್ನತೀಕರಣದ ವಿಶಾಲ ಧ್ಯೇಯದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‍ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.

ಇದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಭಾಗವಾಗಿದೆ. ಚುನಾವಣಾ ಪ್ರಣಾಳಿಕೆ ವೈಯುಕ್ತಿಕ ಘೋಷಣೆ ಆಗಿರುವುದಿಲ್ಲ. ಪಕ್ಷದ ಎಲ್ಲ ಅಭ್ಯರ್ಥಿಗಳಿಗೂ ಅನ್ವಯವಾಗುತ್ತದೆ. ಚುನಾವಣಾ ಪ್ರಣಾಳಿಕೆಯ ಮಹತ್ವವನ್ನು ಎಸ್.ಆರ್.ಬೊಮ್ಮಾಯಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ 1994ರಲ್ಲಿ ಸುಪ್ರೀಂಕೋರ್ಟ್ ಪುನರುಚ್ಛರಿಸಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾ ನಕ್ಕೆ ತರುವ ಮೂಲಕ ಸರಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಸಿದ್ದರಾಮಯ್ಯ ತಮ್ಮ ಲಿಖಿತ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಚುನಾವಣಾ ಅಕ್ರಮ ನಡೆಸಲಾಗಿದೆ ಎಂಬ ಅರ್ಜಿದಾರರ ಆರೋಪ ಸಂಪೂರ್ಣ ಸುಳ್ಳು. ಅರ್ಜಿದಾರರ ಈ ವಾದವು ಪ್ರಜಾಪ್ರತಿನಿಧಿ ಕಾಯ್ದೆಯ ತತ್ವಗಳಿಗೆ ವಿರುದ್ಧವಾಗಿದೆ. ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುವ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ. ನನ್ನ ವಿರುದ್ಧವಲ್ಲದೇ ಕಾಂಗ್ರೆಸ್ ಪಕ್ಷದ ಅನೇಕ ಶಾಸಕರ ವಿರುದ್ಧ ಇದೇ ರೀತಿಯ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆಗೆ ಯೋಗ್ಯವಲ್ಲದ, ಸೂಕ್ತ ಕಾನೂನು ತಿಳುವಳಿಕೆ ಇಲ್ಲದ, ಕೇವಲ ಕ್ಷುಲ್ಲಕ ಪ್ರಚಾರ ಗಿಟ್ಟಿಸಿಕೊಳ್ಳಲು ಸಲ್ಲಿಸಲಾಗಿರುವ ಇಂತಹ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ತಮ್ಮ ಲಿಖಿತ ಹೇಳಿಕೆಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago