ರಾಜ್ಪಿಪ್ಲಾ(ಗುಜರಾತ್): 2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರೊಬ್ಬರು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಪಕ್ಷದ ತಾತ್ವಿಕ ಬೆಂಬಲವನ್ನು ಪ್ರತಿಭಟಿಸಿ ಎಎಪಿ ತೊರೆದಿದ್ದಾರೆ.
2022ರ ವಿಧಾನಸಭಾ ಚುನಾವಣೆಯಲ್ಲಿ ನರ್ಮದಾ ಜಿಲ್ಲೆಯ ನಂದೋದ್ (ಎಸ್ಟಿ) ಕ್ಷೇತ್ರದಿಂದ ಸ್ಪರ್ಧಿಸಿದ್ದ ವಾಸವ ಅವರು ತಮ್ಮ ರಾಜೀನಾಮೆಯಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುವಾಗ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ಮಾತನಾಡುವಂತಿಲ್ಲ ಎಂದು ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ಆದಿವಾಸಿಗಳು ಅನುಭವಿಸುತ್ತಿರುವ ಎಲ್ಲಾ ಸವಲತ್ತುಗಳನ್ನು ಕೊನೆಗೊಳಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.
ಮಣಿಪುರದಲ್ಲಿ ಕೇಂದ್ರವು ‘ಆದಿವಾಸಿಗಳನ್ನು’ ಕೊಂದಿದೆ ಎಂದು ವಾಸವ ಆರೋಪಿಸಿದರು . ಮೂಲಭೂತವಾದ ಮತ್ತು ದ್ವೇಷದ ರಾಜಕೀಯವನ್ನು ವಿರೋಧಿಸಲು ಎಎಪಿಗೆ ಕೇಳಿಕೊಂಡರು. ಎಎಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿರುವ ವಾಸವ, ‘ಏಕರೂಪ ನಾಗರಿಕ ಸಂಹಿತೆಯು ಬುಡಕಟ್ಟು, ಪರಿಶಿಷ್ಟ ಜಾತಿ, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಇತರ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳು, ಜೀವನಶೈಲಿ ಮತ್ತು ಸಾಮಾಜಿಕ ರಚನೆಯ ಮೇಲೆ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದಾರೆ.
ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಅಗತ್ಯವನ್ನು ಪ್ರಸ್ತಾಪಿಸಿದ ನಂತರ, ಎಎಪಿ ತನ್ನ ತಾತ್ವಿಕ ಬೆಂಬಲವನ್ನು ನೀಡಿತು. ಪಕ್ಷದ ನಾಯಕ ಸಂದೀಪ್ ಪಾಠಕ್ ಅದನ್ನು ಎಲ್ಲರ ಒಪ್ಪಿಗೆಯೊಂದಿಗೆ ತರಬೇಕು ಎಂದು ಹೇಳಿದರು. ಎಎಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಪಾಠಕ್ ಇತ್ತೀಚೆಗೆ, “ಎಎಪಿ ತಾತ್ವಿಕವಾಗಿ ಏಕರೂಪ ನಾಗರಿಕ ಸಂಹಿತೆಯನ್ನು ಬೆಂಬಲಿಸುತ್ತದೆ” ಎಂದು ಹೇಳಿದರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…