BREAKING NEWS

ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯ ಕೆನ್ನೆಗೆ ಹೊಡೆದ ಸಚಿವ ಸೋಮಣ್ಣ..!

ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದಾರೆ.

ಈ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಹಂಗಳ ಗ್ರಾಮ ಪಂಚಾಯತಿಯಿಂದ 173 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಹಂಚಿಕೆ ಮಾಡಲಾಗಿತ್ತು.

‘ಫಲಾನುಭವಿಗಳನ್ನು ಸರಿಯಾಗಿ ಆಯ್ಕೆ ಮಾಡಿಲ್ಲ. ನಿವೇಶನ ಇದ್ದವರಿಗೇ ಮತ್ತೆ ಕೊಡಲಾಗಿದೆ. ನಮಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಮುಖಂಡ ನಂಜಪ್ಪ ಅವರು ಹೇಳಿದವರಿಗೆ ನಿವೇಶನ ನೀಡಲಾಗಿದೆ’ ಎಂದು ಆರೋಪಿಸಿ ಕೆಲವು ಮಹಿಳೆಯರು ಸಚಿವರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಈ ಸಂದರ್ಭದಲ್ಲಿ ಕೆಂಪಮ್ಮ ಎಂಬ ಮಹಿಳೆ ಸಚಿವರ ಬಳಿಗೆ ಹೋಗಿ ಸಮಸ್ಯೆ ಹೇಳಲು ಹೊರಟಾಗ‌ ಸೋಮಣ್ಣ ಕೆನ್ನೆಗೆ ಹೊಡೆದಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago