BREAKING NEWS

ಕೇರಳದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ : ಕೊಡಗಿನಲ್ಲಿ ಹೈ ಅಲರ್ಟ್

ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದತ್ತ ಬರುವ ಶಂಕೆ ದಟ್ಟವಾಗಿದೆ. ಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗದಲ್ಲಿ ಭದ್ರತೆಗಾಗಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಬಿರುನಾಣಿ, ಕುಟ್ಟ, ಪರಕಟಕೇರಿ ಮತ್ತು ತೆರಲು ಭಾಗಗಳಲ್ಲಿ ನಕ್ಸಲರಿಗಾಗಿ ಕೂಂಬಿಂಗ್ ಶುರುವಾಗಿದೆ.

ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ಅವರನ್ನು ಕೂಡಲೇ ವಿಚಾರಣೆಗೊಳಪಡಿಸುವಂತೆ ಕೊಡಗು ಜಿಲ್ಲೆಯ ಎಸ್ ಪಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ. ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇರಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಲಾಗುತ್ತಿದೆ.

ಇನ್ನು ಗಡಿ ಭಾಗಕ್ಕೆ ಎಸ್ ಪಿ ರಾಮರಾಜನ್,ವಿರಾಜಪೇಟೆಯ ಡಿ ವೈ ಎಸ್ ಪಿ ಮೋಹನ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

lokesh

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

23 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

23 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

23 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

24 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

24 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

24 hours ago