ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದತ್ತ ಬರುವ ಶಂಕೆ ದಟ್ಟವಾಗಿದೆ. ಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗದಲ್ಲಿ ಭದ್ರತೆಗಾಗಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಬಿರುನಾಣಿ, ಕುಟ್ಟ, ಪರಕಟಕೇರಿ ಮತ್ತು ತೆರಲು ಭಾಗಗಳಲ್ಲಿ ನಕ್ಸಲರಿಗಾಗಿ ಕೂಂಬಿಂಗ್ ಶುರುವಾಗಿದೆ.
ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ಅವರನ್ನು ಕೂಡಲೇ ವಿಚಾರಣೆಗೊಳಪಡಿಸುವಂತೆ ಕೊಡಗು ಜಿಲ್ಲೆಯ ಎಸ್ ಪಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ. ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇರಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಲಾಗುತ್ತಿದೆ.
ಇನ್ನು ಗಡಿ ಭಾಗಕ್ಕೆ ಎಸ್ ಪಿ ರಾಮರಾಜನ್,ವಿರಾಜಪೇಟೆಯ ಡಿ ವೈ ಎಸ್ ಪಿ ಮೋಹನ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…