BREAKING NEWS

‘ಹಾಡುಪಾಡು ರಾಮು’ ಇನ್ನಿಲ್ಲ

ಮೈಸೂರು : ‘ಆಂದೋಲನ’ ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ, ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಬೆಳಗಿನ ಜಾವ 3.20ರಲ್ಲಿ ಹೃದಯಾಘಾತದಿಂದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ಅತ್ಯಾಪ್ತರಾಗಿದ್ದರು. ‘ ಆಂದೋಲನ’ ದಿನಪತ್ರಿಕೆಯಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದರು. ಪತ್ರಿಕೆಯ ಹಾಡುಪಾಡು ಸಂಚಿಕೆಗೆ ರಾಮಸ್ವಾಮಿ ಅವರ ಕೊಡುಗೆ ಅಪಾರವಾಗಿತ್ತು. ಇತ್ತೀಚಿನವರೆಗೂ ಮಾರ್ಗದರ್ಶನ ನೀಡುತ್ತಿದ್ದರು.

ಮೃತರು ಸೋದರಿ ರಾಜಲಕ್ಷ್ಮಿ, ಸೋದರ ಟಿ.ಎಸ್.ವೇಣುಗೋಪಾಲ್, ನಾದಿನಿ ಶೈಲಜಾ, ಸೋದರಿಯ ಪತಿ ಡಾ.ಎಸ್.ತುಕಾರಾಮ್, ಮತ್ತೊಬ್ಬ ಸೋದರಿ ದಿ.ಕುಮುದವಲ್ಲಿ ಅವರ ಪತಿ ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಅವಿವಾಹಿತರಾಗಿದ್ದ ರಾಮು ಅವರು, ಪತ್ರಿಕಾರಂಗದಲ್ಲಿ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ನೊಂದವರು, ಬಡವರ ಏಳಿಗೆಗೆ ಪತ್ರಿಕೆಗಳು ಸ್ಪಂದಿಸಬೇಕಾದ ಬಗೆಯನ್ನು ಪ್ರತಿಕ್ಷಣ ಚಿಂತಿಸುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು. ರಾಮು ಅವರ ಗರಡಿಯಲ್ಲಿ ಪಳಗಿದ ದೊಡ್ಡ ಸಂಖ್ಯೆಯ ಪತ್ರಕರ್ತರು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇದ್ದಾರೆ.

ರಾಮಸ್ವಾಮಿ ಅವರು ಕವಿಯೂ ಆಗಿದ್ದು, ಅಗ್ನಿಸೂಕ್ತ ಮತ್ತು ರಾಮು ಕವಿತೆಗಳು ಎಂಬ ಕವನ ಸಂಕಲನಗಳನ್ನು ಬರೆದಿದ್ದಾರೆ.

ಅಂತಿಮ ದರ್ಶನ : ಮಧ್ಯಾಹ್ನ ೧ ಗಂಟೆವರೆಗೆ ರಾಮಸ್ವಾಮಿ ಅವರ ಮೃತದೇಹವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ಸ್ಮಶಾನದ ಅನಿಲ ಚಿತಾಗಾರದಲ್ಲಿ ರಾಮಸ್ವಾಮಿ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

7 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

7 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

7 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

7 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

7 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

7 hours ago