BREAKING NEWS

‘ಹಾಡುಪಾಡು ರಾಮು’ ಇನ್ನಿಲ್ಲ

ಮೈಸೂರು : ‘ಆಂದೋಲನ’ ದಿನಪತ್ರಿಕೆಯ ಹೃದಯದಂತಿರುವ ಹಾಡುಪಾಡು ಸಂಚಿಕೆಯ ಆರಂಭಕ್ಕೆ ಮೇಟಿಯಾಗಿದ್ದ, ‘ಹಾಡುಪಾಡು ರಾಮು’ ಎಂದೇ ಖ್ಯಾತಿಯಾಗಿದ್ದ ಹಿರಿಯ ಪತ್ರಕರ್ತ ಟಿ.ಎಸ್.ರಾಮಸ್ವಾಮಿ (69) ಅವರು ಮಂಗಳವಾರ ಬೆಳಗಿನ ಜಾವ 3.20ರಲ್ಲಿ ಹೃದಯಾಘಾತದಿಂದ ಸರಸ್ವತಿಪುರಂನ 9ನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ನಿಧನರಾದರು.

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ಅತ್ಯಾಪ್ತರಾಗಿದ್ದರು. ‘ ಆಂದೋಲನ’ ದಿನಪತ್ರಿಕೆಯಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದರು. ಪತ್ರಿಕೆಯ ಹಾಡುಪಾಡು ಸಂಚಿಕೆಗೆ ರಾಮಸ್ವಾಮಿ ಅವರ ಕೊಡುಗೆ ಅಪಾರವಾಗಿತ್ತು. ಇತ್ತೀಚಿನವರೆಗೂ ಮಾರ್ಗದರ್ಶನ ನೀಡುತ್ತಿದ್ದರು.

ಮೃತರು ಸೋದರಿ ರಾಜಲಕ್ಷ್ಮಿ, ಸೋದರ ಟಿ.ಎಸ್.ವೇಣುಗೋಪಾಲ್, ನಾದಿನಿ ಶೈಲಜಾ, ಸೋದರಿಯ ಪತಿ ಡಾ.ಎಸ್.ತುಕಾರಾಮ್, ಮತ್ತೊಬ್ಬ ಸೋದರಿ ದಿ.ಕುಮುದವಲ್ಲಿ ಅವರ ಪತಿ ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಅವಿವಾಹಿತರಾಗಿದ್ದ ರಾಮು ಅವರು, ಪತ್ರಿಕಾರಂಗದಲ್ಲಿ ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ನೊಂದವರು, ಬಡವರ ಏಳಿಗೆಗೆ ಪತ್ರಿಕೆಗಳು ಸ್ಪಂದಿಸಬೇಕಾದ ಬಗೆಯನ್ನು ಪ್ರತಿಕ್ಷಣ ಚಿಂತಿಸುತ್ತಿದ್ದರು. ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದರು. ರಾಮು ಅವರ ಗರಡಿಯಲ್ಲಿ ಪಳಗಿದ ದೊಡ್ಡ ಸಂಖ್ಯೆಯ ಪತ್ರಕರ್ತರು ಮೈಸೂರು ಸೇರಿದಂತೆ ರಾಜ್ಯಾದ್ಯಂತ ಇದ್ದಾರೆ.

ರಾಮಸ್ವಾಮಿ ಅವರು ಕವಿಯೂ ಆಗಿದ್ದು, ಅಗ್ನಿಸೂಕ್ತ ಮತ್ತು ರಾಮು ಕವಿತೆಗಳು ಎಂಬ ಕವನ ಸಂಕಲನಗಳನ್ನು ಬರೆದಿದ್ದಾರೆ.

ಅಂತಿಮ ದರ್ಶನ : ಮಧ್ಯಾಹ್ನ ೧ ಗಂಟೆವರೆಗೆ ರಾಮಸ್ವಾಮಿ ಅವರ ಮೃತದೇಹವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹರಿಶ್ಚಂದ್ರ ಘಾಟ್ ಸ್ಮಶಾನದ ಅನಿಲ ಚಿತಾಗಾರದಲ್ಲಿ ರಾಮಸ್ವಾಮಿ ಅವರ ಮೃತದೇಹದ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago