BREAKING NEWS

ಪ್ರಧಾನಿ ಮಾತು ಕೇಳಿದ್ದರೆ 5 ವರ್ಷವೂ ನಾನೇ ಸಿಎಂ ಆಗಿರುತ್ತಿದ್ದೆ: ಎಚ್ಡಿಕೆ ಅಚ್ಚರಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಸಿಎಂ‌ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಬಂದಾಗ ಮಧ್ಯಪ್ರವೇಶ ಮಾಡಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿವೆ ಎಂದರು.

ಕಪ್ಪು ಚುಕ್ಕೆ ಬರಬಾರದು ಎಂದು ಒಪ್ಪಿಕೊಳ್ಲಿಲ್ಲ

ಈ‌ ವೇಳೆ ಕುಮಾರಸ್ವಾಮಿ ಅವರೇ ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ? ಎಂದು ಸಿದ್ದರಾಮಯ್ಯ ತಿರುಗೇಟು ‌ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ,ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ. ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ‌. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ‌ ಎಂದರು.

ಪ್ರಧಾನಿ ಮಾತು ಕೇಳಿ ತೀರ್ಮಾನ ಮಾಡಿದ್ದರೆ ನಾನು ಕಳೆದ ಐದು ವರ್ಷಗಳ ಕಾಲ ಸಿಎಂ ಆಗ್ತಿದ್ದೆ. ಪದೇ ಪದೇ ಬಿಜೆಪಿ ಬಿ ಟೀಂ ಎಂದು ಹೇಳುತ್ತಾ ನೀವೇ ಬಿಜೆಪಿ ಕಡೆ ತಳ್ಳುತ್ತೀರಿ. ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ನಾನು ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

27 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

33 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

42 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago