ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಬಂದಾಗ ಮಧ್ಯಪ್ರವೇಶ ಮಾಡಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿವೆ ಎಂದರು.
ಕಪ್ಪು ಚುಕ್ಕೆ ಬರಬಾರದು ಎಂದು ಒಪ್ಪಿಕೊಳ್ಲಿಲ್ಲ
ಈ ವೇಳೆ ಕುಮಾರಸ್ವಾಮಿ ಅವರೇ ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ? ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ,ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆ ಚರ್ಚೆ ಮಾಡಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ. ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ ಎಂದರು.
ಪ್ರಧಾನಿ ಮಾತು ಕೇಳಿ ತೀರ್ಮಾನ ಮಾಡಿದ್ದರೆ ನಾನು ಕಳೆದ ಐದು ವರ್ಷಗಳ ಕಾಲ ಸಿಎಂ ಆಗ್ತಿದ್ದೆ. ಪದೇ ಪದೇ ಬಿಜೆಪಿ ಬಿ ಟೀಂ ಎಂದು ಹೇಳುತ್ತಾ ನೀವೇ ಬಿಜೆಪಿ ಕಡೆ ತಳ್ಳುತ್ತೀರಿ. ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ನಾನು ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…