BREAKING NEWS

ಪ್ರಧಾನಿ ಮಾತು ಕೇಳಿದ್ದರೆ 5 ವರ್ಷವೂ ನಾನೇ ಸಿಎಂ ಆಗಿರುತ್ತಿದ್ದೆ: ಎಚ್ಡಿಕೆ ಅಚ್ಚರಿ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿದ್ದರು. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಅವರ ಮಾತು ಕೇಳಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಸಿಎಂ‌ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪ ಬಂದಾಗ ಮಧ್ಯಪ್ರವೇಶ ಮಾಡಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿವೆ ಎಂದರು.

ಕಪ್ಪು ಚುಕ್ಕೆ ಬರಬಾರದು ಎಂದು ಒಪ್ಪಿಕೊಳ್ಲಿಲ್ಲ

ಈ‌ ವೇಳೆ ಕುಮಾರಸ್ವಾಮಿ ಅವರೇ ಏಕೆ ಅವರ ಜೊತೆ ಸೇರಿಕೊಂಡಿದ್ದೀರಾ? ಎಂದು ಸಿದ್ದರಾಮಯ್ಯ ತಿರುಗೇಟು ‌ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ,ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಲೋಕಸಭಾ ಚುನಾವಣೆಗಿಂತ 15 ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಕರೆದು ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರೊಲ್ಲ. ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ಆದರೆ ನಾನು ಅದನ್ನು ತಿರಸ್ಕಾರ ಮಾಡಿದೆ‌. ಕಪ್ಪು ಚುಕ್ಕೆ ಬರಬಾರದು ಎಂಬ ಕಾರಣಕ್ಕಾಗಿ ಮುಂದುವರಿದೆ‌ ಎಂದರು.

ಪ್ರಧಾನಿ ಮಾತು ಕೇಳಿ ತೀರ್ಮಾನ ಮಾಡಿದ್ದರೆ ನಾನು ಕಳೆದ ಐದು ವರ್ಷಗಳ ಕಾಲ ಸಿಎಂ ಆಗ್ತಿದ್ದೆ. ಪದೇ ಪದೇ ಬಿಜೆಪಿ ಬಿ ಟೀಂ ಎಂದು ಹೇಳುತ್ತಾ ನೀವೇ ಬಿಜೆಪಿ ಕಡೆ ತಳ್ಳುತ್ತೀರಿ. ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ನಾನು ಮಾಡೋದಾದರೆ ನೇರವಾಗಿ ಮಾಡ್ತೇವೆ ಎಂದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

14 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

14 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

14 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

14 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

14 hours ago