BREAKING NEWS

ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್‌ ವಾಯುಪಡೆ ಮುಖ್ಯಸ್ಥ ಮುರಾದ್ ಅಬು ಹತ್ಯೆ!

ಟೆಲ್ ಅವಿವ್ (ಇಸ್ರೇಲ್): ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್​ ನಡುವೆ ಸಂಘರ್ಷ ತೀವ್ರಗೊಂಡಿದ್ದು, ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾದ್‌ ಹತ್ಯೆಯಾಗಿರುವುದಾಗಿ ತಿಳಿದುಬಂದಿದೆ.

ಶನಿವಾರ ನಡೆದ ಹತ್ಯಾಕಾಂಡದ ಸಮಯದಲ್ಲಿ ಭಯೋತ್ಪಾದಕರಿಗೆ ನಿರ್ದೇಶನ ನೀಡುವಲ್ಲಿ ಅಬು ಮುರಾದ್‌ ಹೆಚ್ಚು ಹೊಣೆಗಾರನಾಗಿದ್ದ. ಕಳೆದ ರಾತ್ರಿ ಇಸ್ರೇಲ್​ ವಾಯುಪಡೆಯ ಫೈಟರ್ ಜೆಟ್‌ಗಳು ಗಾಜಾ ಪಟ್ಟಿಯಾದ್ಯಂತ ವ್ಯಾಪಕವಾದ ದಾಳಿಗಳನ್ನು ನಡೆಸಿದ್ದು, ಈ ದಾಳಿಯಲ್ಲಿ ಅಬು ಮುರಾದ್‌ ಹತ್ಯೆಯಾಗಿದ್ದಾನೆಂದು ಇಸ್ರೇಲ್ ಹೇಳಿದೆ.

ಈ ಕುರಿತು ಇಸ್ರೇಲ್ ವಾಯುಪಡೆ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್ ಮಾಡಿದೆ. ಹಮಾಸ್‌ ಭಯೋತ್ಪಾದನಾ ತಾಣಗಳು ಮತ್ತು ಗಾಜಾ ಪಟ್ಟಿಯಲ್ಲಿರುವ ನುಖ್ಬಾ ಭಯೋತ್ಪಾದಕ ಕಾರ್ಯಕರ್ತರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಅಬು ಮುರಾದ್ ಹತ್ಯೆಯಾಗಿದ್ದಾನೆಂದು ಹೇಳಿದ್ದಾರೆ.

ವಾಯುಪಡೆಯ ಫೈಟರ್ ಜೆಟ್‌ಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಕಾರ್ಯಾಚರಣೆಯ ಪ್ರಧಾನ ಕಚೇರಿಯ ಮೇಲೆ ದಾಳಿ ಮಾಡಿದವು. ಅಲ್ಲಿಂದಲೇ ಈ ಸಂಘಟನೆಯು ತನ್ನ ವೈಮಾನಿಕ ಚಟುವಟಿಕೆಗಳನ್ನು ನಿರ್ವಹಿಸುತ್ತಿತ್ತು. ಈ ದಾಳಿಯ ಸಮಯದಲ್ಲಿ ಗಾಜಾ ನಗರದ ವಾಯು ಪಡೆಯ ಮುಖ್ಯಸ್ಥ ಮುರಾದ್ ಅಬು ಮುರಾದ್ ಕೊಲೆಯಾಗಿದ್ದಾರೆ. ಈತ ಶನಿವಾರ ನಡೆದ ಹತ್ಯಾಕಾಂಡದ ದಾಳಿಯಲ್ಲಿ ಭಯೋತ್ಪಾದಕರಿಗೆ ನಿರ್ದೇಶಿಸಿದ್ದ ಎಂದು ತಿಳಿಸಿದೆ.

ಇಷ್ಟೇ ಅಲ್ಲ, ”ಸ್ವಲ್ಪ ಸಮಯದ ಹಿಂದೆ ಇಸ್ರೇಲ್​ ರಕ್ಷಣಾ ಪಡೆಯ ಸೈನಿಕರು ಲೆಬನಾನ್‌ನಿಂದ ಇಸ್ರೇಲಿ ಭೂಪ್ರದೇಶಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕ ಕೋಶ ಗುರುತಿಸಿದ್ದಾರೆ. ವಾಯುಪಡೆಯು ಮಾನವರಹಿತ ವೈಮಾನಿಕ ವಾಹನದ ಮೂಲಕ ಈ ಭಯೋತ್ಪಾದಕ ಕೋಶವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ, ಹಲವಾರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಮಾಹಿತಿ ನೀಡಿದೆ.

ಮತ್ತೊಂದೆಡೆ, ರಾತ್ರಿಯಿಡೀ ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಇಸ್ರೇಲ್​ ವಾಯುಪಡೆಗಳು ಹಮಾಸ್‌ನ ಕಮಾಂಡೋ ಪಡೆಗಳಿಗೆ ಸೇರಿದ ಡಜನ್‌ಗಟ್ಟಲೆ ಸ್ಥಳಗಳನ್ನು ನಾಶ ಮಾಡಿದೆ. ಈ ಪ್ರದೇಶಗಳು ಅಕ್ಟೋಬರ್ 7ರಂದು ಇಸ್ರೇಲ್‌ಗೆ ಒಳನುಸುಳುವಿಕೆಗೆ ಕಾರಣವಾಗಿದ್ದವು ಎಂದು ವರದಿಗಳು ತಿಳಿಸಿವೆ.

ಇಸ್ರೇಲ್ ಹಾಗೂ ಹಮಾಸ್ ಸಂಘರ್ಷದ ಮಧ್ಯೆ ಇಸ್ರೇಲ್​ ಸೇನೆಯು ಗಾಜಾ ನಗರದಿಂದ ಎಲ್ಲ ನಾಗರಿಕರಿಗೆ ಸ್ಥಳಾಂತರವಾಗುವಂತೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಗಾಜಾ ಪಟ್ಟಿಯಲ್ಲಿರುವ ಜನರು ವಲಸೆ ಹೋಗುತ್ತಿದ್ದಾರೆ ಎಂದು ಇಸ್ರೇಲ್​ ರಕ್ಷಣಾ ಪಡೆಗಳ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಜೊನಾಥನ್ ಕಾನ್ರಿಕಸ್ ಹೇಳಿದ್ದರು.

ನಾವು ದಕ್ಷಿಣದ ಕಡೆಗೆ ಪ್ಯಾಲೇಸ್ಟಿನಿಯನ್ ನಾಗರಿಕರ ಗಮನಾರ್ಹ ವಲಸೆಯನ್ನು ಗಮನಿಸುತ್ತಿದ್ದೇವೆ. ನಮ್ಮ ಎಚ್ಚರಿಕೆಯನ್ನು ಜನರು ಆಲಿಸಿ ಅರ್ಥಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅಪಾಯಕಾರಿ ಪ್ರದೇಶದಿಂದ ಹೊರಬರುತ್ತಿದ್ದಾರೆ ಎಂದು ಕಾನ್ರಿಕಸ್ ತಿಳಿಸಿದ್ದರು.

andolanait

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

6 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

7 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

7 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

7 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

8 hours ago